ಕುಮಟಾ: ಶಕ್ತಿ ಮತ್ತು ಆರ್ದೃ ಭೂ ಸಂಶೋಧನಾ ಗುಂಪು, ಪರಿಸರ ವಿಜ್ಞಾನ ಕೇಂದ್ರ, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಸಂಘಟಿತ 12ನೆಯ ದ್ವೈವಾರ್ಷಿಕ ಲೇಕ್ 2020 – ಪರಿಸರ ವ್ಯವಸ್ಥೆಯ ರಚನೆ, ಕಾರ್ಯ, ಸರಕು ಮತ್ತು ಸೇವೆಗಳ ಕುರಿತಾದ ಸಮಾವೇಶ ಸ್ಪರ್ಧೆಯಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ 9ನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಸುಶ್ಮಿತಾ ಎಚ್. ನಾಯ್ಕ ಇವಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಕ್ಕನಕೋಡ ಗ್ರಾಮದ ಮನೆಮದ್ದುಗಳ ಕುರಿತಾದ ಪೇಪರ್ ಪ್ರೆಸೆಂಟೇಶನ್ನಲ್ಲಿ ದ್ವಿತೀಯ ಸ್ಥಾನ, ಮತ್ತು 8ನೇ ವರ್ಗದ ವಿದ್ಯಾರ್ಥಿ ಕುಮಾರ ಪರಮೇಶ್ವರ ಭಟ್ಟ ಇವನು ಕುಮಟಾದ ಹೆಗಡೆ ಗ್ರಾಮದ ವೈದ್ಯಕೀಯ ಸಸ್ಯಗಳು ಹಾಗೂ ಅವುಗಳ ಉತ್ಪನ್ನಗಳ ಕುರಿತಾದ ಪೋಸ್ಟರ್ ಪ್ರೆಸೆಂಟೇಶನ್ನಲ್ಲಿ ದ್ವಿತೀಯ ಸ್ಥಾನಗಳಿಸಿ ʼಸಹ್ಯಾದ್ರಿ ಯಂಗ್ ಎಕಾಲಾಜಿಸ್ಟ್ʼ ಪ್ರಶಸ್ತಿ ಪಡೆಯುವುದರ ಮೂಲಕ ಸಂಸ್ಥೆಯ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.…
Read MoreCategory: CVSK
ಕೊಂಕಣದ ಸಿವಿಎಸ್ಕೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕುಮಟಾ: ಶೈಕ್ಷಣಿಕ ಚಟುವಟಿಕೆಗಳ ವಿಚಾರದಲ್ಲಿ ಸದಾ ಮುಂಚೂಣಿಯಲ್ಲಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿಗಳಾದ ಕುಮಾರ ತಿಲಕ ಕುಮಟಾ ಹಾಗೂ ಕುಮಾರ ವೈಭವ ಶಾನಭಾಗ ಇವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಕಾರವಾರದ ವಿಜ್ಞಾನ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುದಲ್ಲದೆ, ಬಾಹ್ಯಾಕಾಶ ವಿಜ್ಞಾನದ ವಿವಿಧ ಚಟುವಟಿಕೆಗಳು ಮತ್ತು ಅಂಶಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಬಾಹ್ಯಾಕಾಶ ಇಲಾಖೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ವತಿಯಿಂದ ನಡೆಸಲಾದ ಯುವಿಕಾ ಯುವ ವಿಜ್ಞಾನಿ…
Read More2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ರಾಜ್ಯಮಟ್ಟದ ತೃತೀಯ ರ್ಯಾಂಕ್ ನೊಂದಿಗೆ ಎಂಟು ಸ್ಥಾನಗಳನ್ನು ತನ್ನ ದಾಗಿಸಿಕೊಂಡ ಕೊಂಕಣ ಸಿ.ವಿ.ಎಸ್.ಕೆ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವು ಪ್ರಕಟಗೊಂಡಿದ್ದು, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯು ರಾಜ್ಯಮಟ್ಟದ ತೃತೀಯ ರ್ಯಾಂಕ್ನ್ನು ತನ್ನದಾಗಿಸಿಕೊಂಡಿದೆ. ಪರೀಕ್ಷೆ ಬರೆದ 125 ವಿದ್ಯಾರ್ಥಿಗಳಲ್ಲಿ 124 ಮಂದಿ ಪ್ರಥಮ ದರ್ಜೆಯಲ್ಲೇ ಉತ್ತೀರ್ಣರಾಗಿದ್ದು ಉತ್ಕೃಷ್ಟ ಫಲಿತಾಂಶವನ್ನು ಒದಗಿಸಿದ್ದಾರೆ. ಕುಮಾರ ಸಂಜಯ ಡಿ. ನಾಯಕ 625ಕ್ಕೆ 623 ಅಂಕ (99.68%) ಅಂಕಗಳನ್ನು ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಕುಮಟಾ ತಾಲೂಕಿಗೆ ಪ್ರಥಮ ಸ್ಥಾನವನ್ನು, ಕುಮಾರ ಕಾರ್ತಿಕ ಎಸ್. ನಾಯ್ಕ 620 ಅಂಕ (99.20%) ರಾಜ್ಯಕ್ಕೆ ಆರನೇ ಸ್ಥಾನ, ಕುಮಾರ ಅಕ್ಷಯ ಎ. ನಾಯ್ಕ ಹಾಗೂ ಕುಮಾರಿ ಪ್ರಜ್ಞಾ ಪಿ. ಶಾನಭಾಗ 619 ಅಂಕ (99.04%) ರಾಜ್ಯಕ್ಕೆ ಏಳನೇ ಸ್ಥಾನ, ಕುಮಾರ ಶ್ರವಣ ಎಂ. ಪೈ ಹಾಗೂ ಕುಮಾರಿ ಶಾಲ್ಮಲಿ ಮಂಕೀಕರ್ 618 ಅಂಕ (98.88%) ರಾಜ್ಯಕ್ಕೆ ಎಂಟನೇ ಸ್ಥಾನ, ಕುಮಾರಿ ಶಿಲ್ಪಾ ಭಟ್ಟ 617 ಅಂಕ (98.72%)…
Read Moreರಾಜ್ಯಕ್ಕೆ ಕುಮಟಾದ ‘ಕೊಂಕಣ’ವೇ ಫರ್ಸ್ಟ್ & ಬೆಸ್ಟ್ (ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಕೊಂಕಣದ ವಿದ್ಯಾರ್ಥಿಗಳದ್ದೇ ದರ್ಬಾರ್)
ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರತಿಸಲದಂತೆ ಈ ವರ್ಷವೂ ಶೇ.100ರಷ್ಟಾಗಿದ್ದು, ರಾಜ್ಯಮಟ್ಟಕ್ಕೆ ಪ್ರಥಮ ರ್ಯಾಂಕ್ ಪಡೆಯುವುದರ ಮೂಲಕ ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶ ದಾಖಲಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಾಲೆಯ 7 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟಾಪ್ 10 ರ್ಯಾಂಕಿಂಗ್ ಪಟ್ಟಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿನಿ ನಾಗಾಂಜಲಿ ಪರಮೇಶ್ವರ ನಾಯ್ಕ ಪೂರ್ಣಾಂಕ (625 ಕ್ಕೆ 625) ಗಳಿಕೆಯ ವಿಶಿಷ್ಟ ಹಾಗೂ ಅಪರೂಪದ ಚಿನ್ನದ ಸಾಧನೆಗೈದು ಸಂಸ್ಥೆಯ ಘನತೆಯನ್ನು ಉತ್ತುಂಗಕ್ಕೇರಿಸಿದ್ದು ಮಾತ್ರವಲ್ಲದೆ ಇಡೀ ರಾಜ್ಯವೇ ಉತ್ತರ ಕನ್ನಡದ ಕುಮಟಾದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ. ಇವಳಿಗೆ ಸಾಥ್ ನೀಡಿದ ಇದೇ ಪ್ರೌಢಶಾಲೆಯ ಇನ್ನೂ 6 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ರ್ಯಾಂಕ್ಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಸಂಸ್ಥೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. ನಾಗಾಂಜಲಿ ನಾಯ್ಕ ಶೇ.100 ಶಾಲೆಗೆ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ,…
Read Moreಪುಲ್ವಾಮಾ ದಾಳಿಯ ಪ್ರತೀಕಾರದ ಅಂಗವಾಗಿ ಕೊಂಕಣದ ಸಿ.ವಿ.ಎಸ್.ಕೆ ಹೈಸ್ಕೂಲ್ನಲ್ಲಿ ವಿಜಯೋತ್ಸವ ಆಚರಣೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಹೈಸ್ಕೂಲ್ನಲ್ಲಿ ಇಂದು ಭಾರತೀಯ ವಾಯುಪಡೆಯು ಪಾಕಿಸ್ತಾನದ ಉಗ್ರನೆಲೆಗಳನ್ನು ನಾಶಮಾಡಿ ಪುಲ್ವಾಮಾ ದಾಳಿಯ ವಿರುದ್ಧ ತೆಗೆದುಕೊಂಡ ಪ್ರತೀಕಾರ ಕ್ರಮವನ್ನು ಬೆಂಬಲಿಸಿ ವಿಜಯೋತ್ಸವವನ್ನು ಆಚರಿಸಲಾಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಘೋಷ ಮೊಳಗಿಸಿ ವಿದ್ಯಾರ್ಥಿಗಳು ಸಂಭ್ರಮಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಕ ಚಿದಾನಂದ ಭಂಡಾರಿ, ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಧ್ಯೇಯವಾಕ್ಯವೇ “ರಾಷ್ಟನಿರ್ಮಾಣ ಮಂದಿರವಿದು ಕೈ ಮುಗಿದು ಒಳಗೆ ಬಾ” ಎಂಬುದಾಗಿದ್ದು ನಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗಳ ಕಣಕಣದಲ್ಲೂ ರಾಷ್ಟ್ರಭಕ್ತಿಯನ್ನು ಮೂಡಿಸುವುದೇ ನಮ್ಮ ಗುರಿ. ಭಾರತದ ವೀರ ಸೈನಿಕರ ಸಾಹಸವನ್ನು ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಉಗ್ರರಿಂದ ಸಾವನ್ನಪ್ಪಿದ ಯೋಧರ ಕುಟುಂಬದ ನೋವಿನಲ್ಲಿ ನಾವೆಲ್ಲರೂ ಭಾಗಿಗಳು. ನಾಳೆ ದೇಶದ ಮೇಲೆ ಯುದ್ಧದ ಕಾರ್ಮೋಡ ಕವಿದರೆ ಎಲ್ಲರೂ ದೇಶದ ಗೆಲುವಿಗೆ ತಮ್ಮ ಕೊಡುಗೆ ನೀಡಲು ಸಿದ್ಧರಿರಬೇಕೆಂದು ಕರೆನೀಡಿದರು. ವಿದ್ಯಾರ್ಥಿಗಳು ಜೈಜವಾನ್ ಜೈಕಿಸಾನ್,…
Read Moreರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು
ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಸಂಪನ್ನಗೊಂಡ ದಕ್ಷಿಣ ಭಾರತ ರಾಜ್ಯಗಳ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ದಾಪುಗಾಲಿಟ್ಟಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕರುಗಳಾದ ಎಚ್.ಆರ್.ರವಿಶಂಕರ ಹಾಗೂ ಭಾಸ್ಕರ ಹೆಗಡೆ ಇವರ ಸೂಕ್ತ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸೂರ್ಯಕಿರಣ ಎನ್. ಮತ್ತು ಪ್ರಮೋದ ಎಲ್. ನಾಯ್ಕ ಇವರು ಸಾರಿಗೆ ಮತ್ತು ಸಂವಹನ ವಿಷಯದಡಿ ಪ್ರದರ್ಶಿಸಿದ ವಿಜ್ಞಾನ ಮಾದರಿಯು ಭಾರತದ ದಕ್ಷಿಣ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನಗಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಹಾಗೂ ಹೆಮ್ಮೆಯ ವಿಷಯವಾಗಿದೆ. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಶೈಲಿಯಲ್ಲಿ ವಿಶಿಷ್ಟ ಛಾಪನ್ನು ಮೂಡಿಸುವಲ್ಲಿ ಹೆಸರುವಾಸಿಯಾಗಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯು ಈ ಮೂಲಕ ಸಂಸ್ಥೆಯ ಸಾಧನೆಯ…
Read Moreರಾಜ್ಯ ಮಟ್ಟಕ್ಕೆ ಕೊಂಕಣದ ವಿದ್ಯಾರ್ಥಿಗಳು
ಕುಮಟಾ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಹಯೋಗದೊಂದಿಗೆ ಕುಮಟಾದ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್ದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ 2018-19ರಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿ ಮಂಡ್ಯದಲ್ಲಿ ಜರುಗಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕವಿತಾ ಗೋಷ್ಠಿಯಲ್ಲಿ ಶಿಲ್ಪಾ ಡಿ. ಭಟ್ಟ ಪ್ರಥಮ, ಕಾರ್ತಿಕ ಪಿ. ನಾಯ್ಕ ದ್ವಿತೀಯ ಸ್ಥಾನಗಳಿಸಿದರೆ, ಕಥಾ ಗೋಷ್ಠಿಯಲ್ಲಿ ಪ್ರಗತಿ ಜಿ. ಹೆಗಡೆ ಪ್ರಥಮ ಹಾಗೂ ಚುಟುಕು ಗೋಷ್ಠಿಯಲ್ಲಿ ಸಂಜಯ ಡಿ. ನಾಯ್ಕ ಪ್ರಥಮ ಸ್ಥಾನಗಳಿಸುವುದರ ಮೂಲಕ ರಾಜ್ಯಮಟ್ಟದಲ್ಲಿ ಸ್ಪರ್ಧಿಸಲಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ, ಶಿಕ್ಷಕರು, ಶೈಕ್ಷಣಿಕ ಸಲಹೆಗಾರರು, ಪಾಲಕರು ಅಭಿನಂದಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.
Read Moreಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಶಿಕ್ಷಕರಿಗೆ ಸನ್ಮಾನ
ಕುಮಟಾ: ಅಪರ ಆಯುಕ್ತಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಡಾ. ಎಚ್. ಎಫ್. ಕಟ್ಟೀಮನಿ ಪ್ರೌಢಶಿಕ್ಷಣ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಕುಮಟಾದ ಮಹಾತ್ಮಾ ಗಾಂಧಿ ಪ್ರೌಢಶಾಲೆ ಚಿತ್ರಿಗಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ, 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿಯೇ ವಿಷಯವಾರು ಗರಿಷ್ಠ ಶೇಕಡಾವಾರು ಸರಾಸರಿ ಅಂಕಗಳನ್ನು ದಾಖಲಿಸಿದ ಕುಮಟಾದ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ನಾಲ್ಕು ವಿಷಯ ಶಿಕ್ಷಕರನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸವರಾಜ ಹೊರಟ್ಟಿಯವರು ಗೌರವಿಸಿ ಸನ್ಮಾನಿಸಿದರು. ವಿಷಯವಾರು ಬೋಧನೆಯ ಅನುಸಾರ ಇಂಗ್ಲೀಷ್ ವಿಷಯದಲ್ಲಿ ಶ್ರೀಮತಿ ವಿನಯಾ ನಾಯಕ ಶೇ.92.48, ಸಮಾಜ ವಿಜ್ಞಾನ ವಿಷಯದಲ್ಲಿ ಶ್ರೀ ಪ್ರಕಾಶ ಗಾವಡಿ ಶೇ.91.41, ಗಣಿತ ವಿಷಯದಲ್ಲಿ ಶ್ರೀ ರಾಜೇಶ ಎಚ್.ಜಿ ಶೇ.83.35, ಹಾಗೂ ವಿಜ್ಞಾನ ವಿಷಯದಲ್ಲಿ ಶ್ರೀ ಭಾಸ್ಕರ ಹೆಗಡೆ ಶೇ.74.1 ಸರಾಸರಿ ಶೇಕಡಾವಾರು ಅಂಕ…
Read Moreರಾಜ್ಯ ಮಟ್ಟಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು
ಕುಮಟಾ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ವಿಶಿಷ್ಟ ಶೈಲಿಯಲ್ಲಿ ಛಾಪನ್ನು ಮೂಡಿಸುವಲ್ಲಿ ಸದಾ ಹೆಸರುವಾಸಿಯಾಗಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರವಾರದಲ್ಲಿ ಇತ್ತಿತ್ತೀಚೆಗೆ ಸಂಪನ್ನಗೊಂಡ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ಸಾ.ಶಿ.ಇಲಾಖೆ ಕಾರವಾರ, ಶೈಕ್ಷಣಿಕ ಜಿಲ್ಲೆ ಶಿರಸಿ ಹಾಗೂ ಜಿಲ್ಲಾ ವಿಜ್ಞಾನ ಕೇಂದ್ರ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ 26ನೇ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ವಚ್ಛ ಹಸಿರು ಮತ್ತು ಆರೋಗ್ಯವಂತ ರಾಷ್ಟ್ರಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಗಳು ಎಂಬ ಶೀರ್ಷಿಕೆಯಡಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಶಾಲ್ಮಲಿ ಎಸ್. ಮಂಕೀಕರ್ ಹಾಗೂ ಕುಮಾರಿ ಖುಷಿ ಸಿ. ಎಚ್. ಇವರು ಗ್ರಾಮೀಣ ಭಾಗದ ಸೀನಿಯರ್ಸ್ ವಿಭಾಗದಲ್ಲಿ ಸಕ್ಕರೆರೋಗ – ಕಾರಣಗಳು, ನಿರ್ವಹಣೆ…
Read Moreರಾಜ್ಯ ಮಟ್ಟದ ಸ್ಪರ್ಧೆಗೆ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು
ಕುಮಟಾ: ಅಂಕೋಲಾದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಇಲ್ಲಿನ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಚಿಮ್ಮಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ವಸುಧಾ ಪ್ರಭು ಮರಾಠಿ ಭಾಷಣ, ಶಿಲ್ಪಾ ಪಟಗಾರ ರಂಗೋಲಿ, ಚಿನ್ಮಯಿ ಭಂಡಾರಿ ಸಂಗಡಿಗರು ಕಲೋತ್ಸವ ನೃತ್ಯ (ವೀರಗಾಸೆ)ದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ಉಳಿದಂತೆ, ಶ್ರೇಯಾ ಶಾನಭಾಗ ಧಾರ್ಮಿಕ ಪಠಣ, ನೇಹಾ ಶಾನಭಾಗ ಸಂಸ್ಕೃತ ಭಾಷಣ, ತೇಜಸ್ವಿನಿ ಶಾನಭಾಗ ತುಳು ಭಾಷಣದಲ್ಲಿ ದ್ವಿತೀಯ ಸ್ಥಾನ ಗಿಟ್ಟಿಸಿದರೆ, ಸುದಿತಿ ಕಾಮತ ಕೊಂಕಣಿ ಭಾಷಣದಲ್ಲಿ ತೃತೀಯ ಸ್ಥಾನ ಪಡೆಯುವುದರ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶೈಕ್ಷಣಿಕ ಸಲಹೆಗಾರರು, ಶಿಕ್ಷಕರು, ಪಾಲಕರು ಶ್ಲಾಘಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
Read More