ಕುಮಟಾ: ಮೊರಾರ್ಜಿ ಶಾಲೆ ಹೆಗಡೆಯಲ್ಲಿ ಜರುಗಿದ ತಾಲೂಕಾ ಮಟ್ಟದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹರ್ಡಲ್ಸ್ನಲ್ಲಿ ಹುಡುಗಿಯರ ವಿಭಾಗದಲ್ಲಿ ಯೋಗಿತಾ ನಾಯ್ಕ, ಹುಡುಗರ ವಿಭಾಗದಲ್ಲಿ ಧೀರಜ್ ನಾಯ್ಕ, ಚೆಸ್ನಲ್ಲಿ ಪ್ರಣವ್ಯಾ ಕಡೂರ ಹಾಗೂ ಪ್ರಣತ್ ಕಡೂರ, ಯೋಗದಲ್ಲಿ ಇಂಚರಾ ಭಂಡಾರಿ ಹಾಗೂ ಮಾನ್ಯ ಶೇಟ ಇವರುಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶೈಕ್ಷಣಿಕ ಸಲಹೆಗಾರರು, ಮುಖ್ಯಾಧ್ಯಾಪಕರು, ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಕೋರಿದ್ದಾರೆ.
Read MoreCategory: CVSK
ಕೊಂಕಣದಲ್ಲಿ ಶಾಲಾ ಸಂಸತ್ ಉದ್ಘಾಟನೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಂಕೋಲಾದ ಪೂರ್ಣಪ್ರಜ್ಞಾ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಆದ ಪ್ರಶಾಂತ ನಾಯಕ ಅಂಕೋಲಾ ಇವರು, ವಿದ್ಯಾರ್ಥಿ ದಿಸೆಯಲ್ಲೇ ಮುಂದಾಳತ್ವದ ಗುಣ ಬೆಳೆಸಿಕೊಳ್ಳಬೇಕು. ದೇಶಸ ಚುಕ್ಕಾಣಿ ಹಿಡಿವ ಪ್ರಾಮಾಣಿಕ ಹಾಗೂ ದಕ್ಷ ನೇತಾರರಾಗಬೇಕು. ಪ್ರಜಾಪ್ರಭುತ್ವದ ಅರಿವನ್ನು ಮೂಡಿಸುವ ಸಲುವಾಗಿ ಈ ಶಾಲಾ ಸಂಸತ್ ಉದ್ಘಾಟನೆಗೊಂಡಿದೆ ಎಂದರು. ತನ್ನ ಜೀವನದಲ್ಲಿ ನಾನೊಬ್ಬ ಹೇಗೆ ಮುಂದಾಳುವಾದೆ ಎಂದು ವಿವರಿಸಿ, ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೇತಾರರಾಗಿ ದೇಶ ಕಟ್ಟುವ, ದೇಶವನ್ನು ಪ್ರೀತಿಸುವ ವಿದ್ಯಾರ್ಥಿಗಳಾಗಿ ಎಂದು ಕರೆನೀಡಿ ಶುಭಾಷಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಬಿ.ಎಸ್.ಗೌಡರವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳು ನಾಳಿನ ಬಾಳಿನಲ್ಲಿ ಜಗತ್ತಿಗೆ ಹೇಗೆ ಬೆಳಕಾಗಬೇಕೆಂದು ಉದಾಹರಣೆಗಳ…
Read Moreಸಿವಿಎಸ್ಕೆ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೂರ್ಯ ನಮಸ್ಕಾರದ ಜೊತೆಗೆ ಇಪ್ಪತ್ತೊಂದು ವಿವಿಧ ಯೋಗಾಸನಗಳನ್ನು ಪ್ರದರ್ಶಿಸುವುದರ ಮೂಲಕ ವಿದ್ಯಾರ್ಥಿಗಳು ಯೋಗ ದಿನಾಚರಣೆಯನ್ನು ಆಚರಿಸಿದರು. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಯೋಗ ಸ್ಪರ್ಧೆಗಳನ್ನು ನಡೆಸಿ, ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ತರಬೇತುದಾರರಾದ ಶಾಲೆಯ ದೈಹಿಕ ಶಿಕ್ಷಕ ಜಯರಾಜ ಶೇರುಗಾರ ಹಾಗೂ ನಾಗರಾಜ ಭಂಡಾರಿ ವಿದ್ಯಾರ್ಥಿಗಳಿಂದ ಮನಸ್ಸಿಗೆ ಮುದ ನೀಡುವ ಹಿನ್ನಲೆ ಸಂಗೀತದ ಜೊತೆ ಭಿನ್ನ-ಭಿನ್ನ ಆಸನಗಳನ್ನು ಮಾಡಿಸಿದರು. ಶಾಲಾ ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಬಿ.ಎಸ್. ಗೌಡ, ಆರ್.ಎಚ್.ದೇಶಭಂಡಾರಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Read Moreಕೊಂಕಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ
ಕುಮಟಾ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಂಗಸಂಸ್ಥೆಗಳಾದ ಆರ್ಡಿಎಸ್ಎಚ್ ಬಾಲಮಂದಿರ, ಸರಸ್ವತಿ ವಿದ್ಯಾಕೇಂದ್ರ, ಸಿವಿಎಸ್ಕೆ ಪ್ರೌಢಶಾಲೆ, ಸರಸ್ವತಿ ಪ.ಪೂ. ಕಾಲೇಜ್, ಜಾನಕಿ ಪ್ರಭು ಪ್ರತಿಭಾ ಚೈತನ್ಯ ಕೇಂದ್ರ, ಸರಸ್ವತಿ ಮಾಳಪ್ಪ ಕಾಮತ ಕೃಷಿ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ ಇವುಗಳ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ವಿಠ್ಠಲ ಆರ್. ನಾಯಕ ಧ್ವಜಾರೋಹಣೆ ನೆರವೇರಿಸಿ ಧ್ವಜವಂದನೆಗೈದರು. ಕಾರ್ಯದರ್ಶಿಗಳಾದ ಮುರಳೀಧರ ಪ್ರಭು ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತ, ಇನ್ನು 25 ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ ಆಚರಿಸಲಿದ್ದೇವೆ. ಇಂದಿನ ವಿದ್ಯಾರ್ಥಿಗಳು ಭಾರತವನ್ನು ವಿಶ್ವ ಗುರುವಾಗಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕು. ನಮ್ಮೆಲ್ಲರ ಕರ್ತವ್ಯವನ್ನು ನಾವು ಸ್ಮರಿಸಬೇಕು. ಅಮೃತ ಮಹೋತ್ಸವದ ಈ ಘಳಿಗೆಯಲ್ಲಿ ‘ಡೈಮಂಡ್ ರನ್’ ಕಾರ್ಯಕ್ರಮವನ್ನು ಸಂಯೋಜಿಸಿ, ಸಂಸ್ಥೆಯ 75 ವಿದ್ಯಾರ್ಥಿಗಳು ನಗರದ ಬೀದಿಗಳಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶತಮಾನೋತ್ಸವದ ಕಡೆಗೆ ನಾವು ಚಲಿಸುತ್ತಿರುವುದನ್ನು ಅರ್ಥೈಸುವಂತೆ…
Read More‘ಸಹ್ಯಾದ್ರಿ ಯಂಗ್ ಎಕಾಲಾಜಿಸ್ಟ್’ ಪ್ರಶಸ್ತಿ ಪಡೆದ ಕೊಂಕಣದ ವಿದ್ಯಾರ್ಥಿಗಳು
ಕುಮಟಾ: ಶಕ್ತಿ ಮತ್ತು ಆರ್ದೃ ಭೂ ಸಂಶೋಧನಾ ಗುಂಪು, ಪರಿಸರ ವಿಜ್ಞಾನ ಕೇಂದ್ರ, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇವರು ಸಂಘಟಿತ 12ನೆಯ ದ್ವೈವಾರ್ಷಿಕ ಲೇಕ್ 2020 – ಪರಿಸರ ವ್ಯವಸ್ಥೆಯ ರಚನೆ, ಕಾರ್ಯ, ಸರಕು ಮತ್ತು ಸೇವೆಗಳ ಕುರಿತಾದ ಸಮಾವೇಶ ಸ್ಪರ್ಧೆಯಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ 9ನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಸುಶ್ಮಿತಾ ಎಚ್. ನಾಯ್ಕ ಇವಳು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಕ್ಕನಕೋಡ ಗ್ರಾಮದ ಮನೆಮದ್ದುಗಳ ಕುರಿತಾದ ಪೇಪರ್ ಪ್ರೆಸೆಂಟೇಶನ್ನಲ್ಲಿ ದ್ವಿತೀಯ ಸ್ಥಾನ, ಮತ್ತು 8ನೇ ವರ್ಗದ ವಿದ್ಯಾರ್ಥಿ ಕುಮಾರ ಪರಮೇಶ್ವರ ಭಟ್ಟ ಇವನು ಕುಮಟಾದ ಹೆಗಡೆ ಗ್ರಾಮದ ವೈದ್ಯಕೀಯ ಸಸ್ಯಗಳು ಹಾಗೂ ಅವುಗಳ ಉತ್ಪನ್ನಗಳ ಕುರಿತಾದ ಪೋಸ್ಟರ್ ಪ್ರೆಸೆಂಟೇಶನ್ನಲ್ಲಿ ದ್ವಿತೀಯ ಸ್ಥಾನಗಳಿಸಿ ʼಸಹ್ಯಾದ್ರಿ ಯಂಗ್ ಎಕಾಲಾಜಿಸ್ಟ್ʼ ಪ್ರಶಸ್ತಿ ಪಡೆಯುವುದರ ಮೂಲಕ ಸಂಸ್ಥೆಯ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.…
Read Moreಕೊಂಕಣದ ಸಿವಿಎಸ್ಕೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕುಮಟಾ: ಶೈಕ್ಷಣಿಕ ಚಟುವಟಿಕೆಗಳ ವಿಚಾರದಲ್ಲಿ ಸದಾ ಮುಂಚೂಣಿಯಲ್ಲಿರುವ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿಗಳಾದ ಕುಮಾರ ತಿಲಕ ಕುಮಟಾ ಹಾಗೂ ಕುಮಾರ ವೈಭವ ಶಾನಭಾಗ ಇವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚಿಗೆ ಕಾರವಾರದ ವಿಜ್ಞಾನ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುದಲ್ಲದೆ, ಬಾಹ್ಯಾಕಾಶ ವಿಜ್ಞಾನದ ವಿವಿಧ ಚಟುವಟಿಕೆಗಳು ಮತ್ತು ಅಂಶಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಬಾಹ್ಯಾಕಾಶ ಇಲಾಖೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ವತಿಯಿಂದ ನಡೆಸಲಾದ ಯುವಿಕಾ ಯುವ ವಿಜ್ಞಾನಿ…
Read More2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ರಾಜ್ಯಮಟ್ಟದ ತೃತೀಯ ರ್ಯಾಂಕ್ ನೊಂದಿಗೆ ಎಂಟು ಸ್ಥಾನಗಳನ್ನು ತನ್ನ ದಾಗಿಸಿಕೊಂಡ ಕೊಂಕಣ ಸಿ.ವಿ.ಎಸ್.ಕೆ
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವು ಪ್ರಕಟಗೊಂಡಿದ್ದು, ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯು ರಾಜ್ಯಮಟ್ಟದ ತೃತೀಯ ರ್ಯಾಂಕ್ನ್ನು ತನ್ನದಾಗಿಸಿಕೊಂಡಿದೆ. ಪರೀಕ್ಷೆ ಬರೆದ 125 ವಿದ್ಯಾರ್ಥಿಗಳಲ್ಲಿ 124 ಮಂದಿ ಪ್ರಥಮ ದರ್ಜೆಯಲ್ಲೇ ಉತ್ತೀರ್ಣರಾಗಿದ್ದು ಉತ್ಕೃಷ್ಟ ಫಲಿತಾಂಶವನ್ನು ಒದಗಿಸಿದ್ದಾರೆ. ಕುಮಾರ ಸಂಜಯ ಡಿ. ನಾಯಕ 625ಕ್ಕೆ 623 ಅಂಕ (99.68%) ಅಂಕಗಳನ್ನು ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಕುಮಟಾ ತಾಲೂಕಿಗೆ ಪ್ರಥಮ ಸ್ಥಾನವನ್ನು, ಕುಮಾರ ಕಾರ್ತಿಕ ಎಸ್. ನಾಯ್ಕ 620 ಅಂಕ (99.20%) ರಾಜ್ಯಕ್ಕೆ ಆರನೇ ಸ್ಥಾನ, ಕುಮಾರ ಅಕ್ಷಯ ಎ. ನಾಯ್ಕ ಹಾಗೂ ಕುಮಾರಿ ಪ್ರಜ್ಞಾ ಪಿ. ಶಾನಭಾಗ 619 ಅಂಕ (99.04%) ರಾಜ್ಯಕ್ಕೆ ಏಳನೇ ಸ್ಥಾನ, ಕುಮಾರ ಶ್ರವಣ ಎಂ. ಪೈ ಹಾಗೂ ಕುಮಾರಿ ಶಾಲ್ಮಲಿ ಮಂಕೀಕರ್ 618 ಅಂಕ (98.88%) ರಾಜ್ಯಕ್ಕೆ ಎಂಟನೇ ಸ್ಥಾನ, ಕುಮಾರಿ ಶಿಲ್ಪಾ ಭಟ್ಟ 617 ಅಂಕ (98.72%)…
Read Moreರಾಜ್ಯಕ್ಕೆ ಕುಮಟಾದ ‘ಕೊಂಕಣ’ವೇ ಫರ್ಸ್ಟ್ & ಬೆಸ್ಟ್ (ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಕೊಂಕಣದ ವಿದ್ಯಾರ್ಥಿಗಳದ್ದೇ ದರ್ಬಾರ್)
ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರತಿಸಲದಂತೆ ಈ ವರ್ಷವೂ ಶೇ.100ರಷ್ಟಾಗಿದ್ದು, ರಾಜ್ಯಮಟ್ಟಕ್ಕೆ ಪ್ರಥಮ ರ್ಯಾಂಕ್ ಪಡೆಯುವುದರ ಮೂಲಕ ರಾಜ್ಯದಲ್ಲಿಯೇ ಅತ್ಯುತ್ತಮ ಫಲಿತಾಂಶ ದಾಖಲಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಾಲೆಯ 7 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟಾಪ್ 10 ರ್ಯಾಂಕಿಂಗ್ ಪಟ್ಟಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿನಿ ನಾಗಾಂಜಲಿ ಪರಮೇಶ್ವರ ನಾಯ್ಕ ಪೂರ್ಣಾಂಕ (625 ಕ್ಕೆ 625) ಗಳಿಕೆಯ ವಿಶಿಷ್ಟ ಹಾಗೂ ಅಪರೂಪದ ಚಿನ್ನದ ಸಾಧನೆಗೈದು ಸಂಸ್ಥೆಯ ಘನತೆಯನ್ನು ಉತ್ತುಂಗಕ್ಕೇರಿಸಿದ್ದು ಮಾತ್ರವಲ್ಲದೆ ಇಡೀ ರಾಜ್ಯವೇ ಉತ್ತರ ಕನ್ನಡದ ಕುಮಟಾದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ. ಇವಳಿಗೆ ಸಾಥ್ ನೀಡಿದ ಇದೇ ಪ್ರೌಢಶಾಲೆಯ ಇನ್ನೂ 6 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ರ್ಯಾಂಕ್ಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಸಂಸ್ಥೆಯ ಹಿರಿಮೆಯನ್ನು ಎತ್ತಿ ಹಿಡಿದಿದ್ದಾರೆ. ನಾಗಾಂಜಲಿ ನಾಯ್ಕ ಶೇ.100 ಶಾಲೆಗೆ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ,…
Read Moreಪುಲ್ವಾಮಾ ದಾಳಿಯ ಪ್ರತೀಕಾರದ ಅಂಗವಾಗಿ ಕೊಂಕಣದ ಸಿ.ವಿ.ಎಸ್.ಕೆ ಹೈಸ್ಕೂಲ್ನಲ್ಲಿ ವಿಜಯೋತ್ಸವ ಆಚರಣೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಹೈಸ್ಕೂಲ್ನಲ್ಲಿ ಇಂದು ಭಾರತೀಯ ವಾಯುಪಡೆಯು ಪಾಕಿಸ್ತಾನದ ಉಗ್ರನೆಲೆಗಳನ್ನು ನಾಶಮಾಡಿ ಪುಲ್ವಾಮಾ ದಾಳಿಯ ವಿರುದ್ಧ ತೆಗೆದುಕೊಂಡ ಪ್ರತೀಕಾರ ಕ್ರಮವನ್ನು ಬೆಂಬಲಿಸಿ ವಿಜಯೋತ್ಸವವನ್ನು ಆಚರಿಸಲಾಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಯಘೋಷ ಮೊಳಗಿಸಿ ವಿದ್ಯಾರ್ಥಿಗಳು ಸಂಭ್ರಮಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಕ ಚಿದಾನಂದ ಭಂಡಾರಿ, ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಧ್ಯೇಯವಾಕ್ಯವೇ “ರಾಷ್ಟನಿರ್ಮಾಣ ಮಂದಿರವಿದು ಕೈ ಮುಗಿದು ಒಳಗೆ ಬಾ” ಎಂಬುದಾಗಿದ್ದು ನಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗಳ ಕಣಕಣದಲ್ಲೂ ರಾಷ್ಟ್ರಭಕ್ತಿಯನ್ನು ಮೂಡಿಸುವುದೇ ನಮ್ಮ ಗುರಿ. ಭಾರತದ ವೀರ ಸೈನಿಕರ ಸಾಹಸವನ್ನು ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಉಗ್ರರಿಂದ ಸಾವನ್ನಪ್ಪಿದ ಯೋಧರ ಕುಟುಂಬದ ನೋವಿನಲ್ಲಿ ನಾವೆಲ್ಲರೂ ಭಾಗಿಗಳು. ನಾಳೆ ದೇಶದ ಮೇಲೆ ಯುದ್ಧದ ಕಾರ್ಮೋಡ ಕವಿದರೆ ಎಲ್ಲರೂ ದೇಶದ ಗೆಲುವಿಗೆ ತಮ್ಮ ಕೊಡುಗೆ ನೀಡಲು ಸಿದ್ಧರಿರಬೇಕೆಂದು ಕರೆನೀಡಿದರು. ವಿದ್ಯಾರ್ಥಿಗಳು ಜೈಜವಾನ್ ಜೈಕಿಸಾನ್,…
Read Moreರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ಕೊಂಕಣದ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು
ಕುಮಟಾ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಸಂಪನ್ನಗೊಂಡ ದಕ್ಷಿಣ ಭಾರತ ರಾಜ್ಯಗಳ ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನಕ್ಕೆ ದಾಪುಗಾಲಿಟ್ಟಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕರುಗಳಾದ ಎಚ್.ಆರ್.ರವಿಶಂಕರ ಹಾಗೂ ಭಾಸ್ಕರ ಹೆಗಡೆ ಇವರ ಸೂಕ್ತ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸೂರ್ಯಕಿರಣ ಎನ್. ಮತ್ತು ಪ್ರಮೋದ ಎಲ್. ನಾಯ್ಕ ಇವರು ಸಾರಿಗೆ ಮತ್ತು ಸಂವಹನ ವಿಷಯದಡಿ ಪ್ರದರ್ಶಿಸಿದ ವಿಜ್ಞಾನ ಮಾದರಿಯು ಭಾರತದ ದಕ್ಷಿಣ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನಗಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಹಾಗೂ ಹೆಮ್ಮೆಯ ವಿಷಯವಾಗಿದೆ. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತನ್ನದೇ ಶೈಲಿಯಲ್ಲಿ ವಿಶಿಷ್ಟ ಛಾಪನ್ನು ಮೂಡಿಸುವಲ್ಲಿ ಹೆಸರುವಾಸಿಯಾಗಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯು ಈ ಮೂಲಕ ಸಂಸ್ಥೆಯ ಸಾಧನೆಯ…
Read More