ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಶಿಕ್ಷಣ ಸಂಸ್ಥೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ವಿಶ್ವ ಸಾರಸ್ವತ ಫೆಡರೇಶನ್ ಅಧ್ಯಕ್ಷ ಹಾಗೂ ಹಾಂಗ್ಯೊ ಐಸ್ಕ್ರೀಂ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ ಪೈ ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಮುರಳೀಧರ ಪ್ರಭು, 97 ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಇಂದು ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕಲಿಯುವ ಆಸಕ್ತಿ ಇರುವ ಸರಿ ಸುಮಾರು 50 ಬಡ ಪ್ರತಿಭಾವಂತ ಮಕ್ಕಳಿಗೆ ಬಹುತೇಕ ಎಲ್ಲವೂ ಉಚಿತ ಮಾಡಿದ್ದೇವೆ. ದಿನಕರ ದೇಸಾಯಿಯವರ ಆದರ್ಶವನ್ನು ಮುಂದಿಟ್ಟು ಶಿಕ್ಷಣ ದಾನಿಗಳಿಂದಲೇ ನಡೆಸಿಕೊಂಡು ಹೋಗುತ್ತಿರುವ ಸಂಸ್ಥೆ ಇದಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಟಾಪ್ 10 ರ್ಯಾಂಕ್ನಲ್ಲಿ ಪ್ರತಿ ವರ್ಷ ನಮ್ಮ ಶಾಲೆಯ ಐದರಿಂದ ಆರು ವಿದ್ಯಾರ್ಥಿಗಳಾದರೂ ಇದ್ದೇ ಇರುತ್ತಾರೆ ಎಂಬುದು ನಮಗೆ ಹೆಮ್ಮೆ. ಈ ಸಂಸ್ಥೆ ಗೆ ಪ್ರದೀಪ…
Read MoreCategory: SVK
ಕೊಂಕಣದಲ್ಲಿ ಗಣರಾಜ್ಯೋತ್ಸವ ಆಚರಣೆ
ಕುಮಟಾ: 73ನೆಯ ಗಣರಾಜ್ಯೋತ್ಸವದ ಅಂಗವಾಗಿ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಮುರಳೀಧರ ಪ್ರಭುರವರು ಧ್ವಜಾರೋಹಣಗೈದು ಮಾತನಾಡುತ್ತ, ಪ್ರಜಾಪ್ರಭುತ್ವ ನಮ್ಮ ಪಾಲಿಗೆ ವರದಾನವಾದರೂ ಇಂದು ಅದರ ಪ್ರಜಾಪ್ರಭುತ್ವದ ಅಗತ್ಯವಿದೆಯೇ ಎಂದು ವಿಮರ್ಶಿಸುವ ಪರಿಸ್ಥಿತಿ ಉಂಟಾದದ್ದು ವಿಪರ್ಯಾಸವೇ ಸರಿ. ಭಾರತ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ರವರ ಅಧ್ಯಕ್ಷತೆಯಲ್ಲಿ ರೂಪಿತವಾದ ಈ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನು ಓದಿ, ಅರ್ಥೈಸಿಕೊಂಡು, ಅದರ ಆಶಯಗಳನ್ನು ಅಳವಡಿಸಿಕೊಂಡು ಬದುಕಬೇಕಾದ ಅಗತ್ಯತೆ ಇದೆ ಎಂದರು. ಸಂವಿಧಾನವನ್ನು ಗೌರವಿಸುವ, ದೇಶದ ಘನತೆಯನ್ನು ಎತ್ತಿ ಹಿಡಿಯುವ ಮೂಲಕ ಭಾರತವನ್ನು ವಿಶ್ವಗುರುವಾಗಿ ಮಾಡಬೇಕಾದ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾರ್ಮಿಕವಾಗಿ ನುಡಿದರು. ಸಂಸ್ಥೆಯ ಅಧ್ಯಕ್ಷರಾದ ವಿಠ್ಠಲ ಆರ್. ನಾಯಕ, ಟ್ರಸ್ಟಿಗಳಾದ ಅನಂತ ಶಾನಭಾಗ, ವಿಶ್ರಾಂತ ಮುಖ್ಯಾಧ್ಯಾಪಕರಾದ ಎಂ.ಎಂ.ಹೆಗಡೆ, ವಿಧಾತ್ರಿಯ ಗುರುರಾಜ ಶೆಟ್ಟಿ, ಅಂಗಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಈ…
Read Moreಕೊಂಕಣದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರ
ಕುಮಟಾ 22-11-2021: ರಾಷ್ಟ್ರೀಯ ಶಿಕ್ಷಣ ನೀತಿ 2020 ರ ವಿಶ್ಲೇಷಣೆ ಮತ್ತು ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಏರ್ಪಡಿಸಲಾಗಿತ್ತು. ಶ್ರೀ ಎಸ್.ಆರ್.ಮನಹಳ್ಳಿ ವಿಶ್ರಾಂತ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬಾಗಲಕೋಟ ಅವರು ಕಾರ್ಯಗಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಷ್ಟೀಯ ಶಿಕ್ಷಣ ನೀತಿ ಇದರ ಅನುಷ್ಠಾನದ ಕುರಿತು ನಿಖರ ಮಾಹಿತಿಗಳನ್ನು ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ಭಾರತದಲ್ಲಿ ಮಕ್ಕಳೇ ದೇಶದ ಆಸ್ತಿ ಎಂದು ತಿಳಿದಿರುವಾಗ ಈ ಶಿಕ್ಷಣ ಭಾರತದಲ್ಲಿ ಮುಂದೊಂದು ದಿನ ಹೊಸ ಕ್ರಾಂತಿಯನ್ನುಂಟುಮಾಡಿ ಭಾರತ ವಿಶ್ವಗುರು ಆಗಲು ಸಾಧ್ಯ, ಸ್ವಾವಲಂಬಿತ ಭಾರತ ಆಗಲು ಸಾಧ್ಯ ಎಂದು ಹಲವು ಉದಾಹರಣೆಗಳ ಮೂಲಕ ವಿಶ್ಲೇಷಿದರು. ವಿದ್ಯಾರ್ಥಿಗಳು ಯಾವ ಒತ್ತಡಕ್ಕೆ ಒಳಗಾಗದೇ ನಲಿಕಲಿವ ಹಾಗೂ ಸೃಜನಶೀಲ ವ್ಯಕ್ತಿತ್ವ ನಿರ್ಮಾಣದ ಗುಣಮಟ್ಟದ ಶಿಕ್ಷಣ ಇದಾಗಿದೆ ಎಂದರು. ರಾಷ್ಟ್ರೀಯ ಶಿಕ್ಷಣದ ಎಂಟು ಹಂತಗಳನ್ನು ವಿವರಿಸಿದರು. ಟ್ರಸ್ಟಿನ…
Read Moreಸರಸ್ವತಿ ವಿದ್ಯಾಕೇಂದ್ರದಲ್ಲಿ ಪುಟಾಣಿ ವಿಜ್ಞಾನಿಗಳಿಂದ ವಿಜ್ಞಾನ ದಿನ ಆಚರಣೆ
ಕುಮಟಾ: 1928 ರ ಫೆಬ್ರವರಿ 28 ರಂದು ಮಹಾನ್ ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರು ವಿಶ್ವ ಪ್ರಸಿದ್ಧವಾದ “ರಾಮನ್ ಎಫೆಕ್ಟ”ನ್ನು ಜಗತ್ತಿಗೆ ಬಹಿರಂಗ ಪಡಿಸಿದರು. ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನದ ವಿಶೇಷವಾಗಿ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದಲ್ಲಿ ಪುಟಾಣಿಗಳೇ ವಿಜ್ಞಾನಿಗಳ ವೇಷ ಧರಿಸಿ ಆಯಾ ವಿಜ್ಞಾನಿಗಳ ಸಂಶೋಧನೆ ಆವಿಷ್ಕಾರಗಳ ಕುರಿತಾಗಿ ಬೆಳಕು ಚೆಲ್ಲುವ ಮೂಲಕ ಅರ್ಥಪೂರ್ಣವಾಗಿ ವಿಜ್ಞಾನ ದಿನವನ್ನು ಆಚರಿಸಿದರು. ಆಕಾಶ ನಾಯಕ ಸರ್.ಸಿ.ವಿ.ರಾಮನ್ ಪಾತ್ರದಲ್ಲಿ ಬಂದು ರಾಮನ್ ಎಫೆಕ್ಟ ಬಗ್ಗೆ ವಿವರಿಸಿ ಎಲ್ಲರನ್ನು ಮೆಚ್ಚಿಸಿದರೆ, ಚಂದನ ಹೆಗಡೆ ಜಗದೀಶ ಚಂದ್ರ ಬೋಸ್ ಆಗಿ, ವಿರಾಜ್ ಎಂ.ವಿಶ್ವೇಶ್ವರಯ್ಯರ ವೇಶ ತೊಟ್ಟು, ಸುದರ್ಶನ ಹೆಗಡೆ ವಿಕ್ರಂ ಸಾರಾಭಾಯಿಯ ರೂಪದಲ್ಲಿ ಹಾಗೂ ಮಯೂರ್ ನಾಯ್ಕ ಸಲೀಂ ಅಲಿಯಾಗಿ ಮಿಂಚಿ ವೈಜ್ಞಾನಿಕ ಲೋಕದ ಅಚ್ಚರಿಗಳನ್ನು ಸಭೆಗೆ ಪರಿಚಯಿಸಿದರು. ವಿಜ್ಞಾನ ಶಿಕ್ಷಕರುಗಳಾದ ಶ್ರೀಮತಿ ಉಷಾ ಭಟ್ಟ, ಮಹೇಶ್ವರಿ…
Read Moreಕೊಂಕಣ ಎಜ್ಯುಕೇಶನ್ ಟ್ರಸ್ಟನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಕುಮಟಾ: ಸಂಸ್ಕಾರ ಹಾಗೂ ಸಂಪ್ರದಾಯದ ತಳಹದಿಯಲ್ಲಿ ಶಿಕ್ಷಣ ನೀಡಬೇಕು ಎಂಬ ಘನ ಉದ್ದೇಶ ಹೊತ್ತು ಮುನ್ನಡೆಯುತ್ತಿರುವ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಮಾತೃಮಂಡಳಿಯ ಸಹಯೋಗದಲ್ಲಿ ಡಾ. ಆರತಿ ವಿ. ಬಿ. ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಕೃತಿಯ ಸೌಂದರ್ಯ ಇರುವುದು ಸ್ತ್ರೀಯಲ್ಲಿ ಎಂಬುದು ಮಾತು ಸತ್ಯ, ಪ್ರತಿಯೊಂದರಲ್ಲಿಯೂ ಸುಂದರತೆ ಕಾಣುವ ಮಾತೆಯರಿಂದ ಮಾತ್ರವೇ ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ವಿವರಿಸಿದ ಅವರು ಪುರುಷರಲ್ಲಿ ಹಾಗೂ ಸ್ತ್ರೀಯರಲ್ಲಿ ಅನೇಕ ವಿಧದ ವೈಶಿಷ್ಟ್ಯಗಳು ಇರುತ್ತವೆ. ನಾವು ನಾವಾಗಿಯೇ ಇರಬೇಕು. ಪುರುಷ ಸ್ತ್ರೀ ಆಗಲು ಪ್ರಯತ್ನಿಸಲಾಗದು, ಸ್ತ್ರೀ ಪುರುಷರಂತೆ ಆಗಲು ಪ್ರಯತ್ನಿಸುತ್ತಿರುವುದು ಹುಚ್ಚುತನ ಮಾತೃತ್ವ ಇರುವುದು ಸ್ತ್ರೀಯರಲ್ಲಿ, ಸ್ತ್ರೀ ಎಂಬುದೊಂದು ಶಕ್ತಿ ಯಾವ ಸ್ತ್ರೀ ತನ್ನೊಳಗಿನ ವಿದ್ಯೆ, ವಿಜ್ಞಾನ, ಕೌಶಲ, ಮಾತೃತ್ವವನ್ನು ಜಗತ್ತಿಗೆ ಕೊಟ್ಟಾಗ ಎಲ್ಲರೂ ನಮ್ಮನ್ನು ಮಾತೆಯರು ಎನ್ನುವರು. ತ್ಯಾಗ ಮಾಡುವ ಬಗ್ಗೆ ಕಲಿಸಿದವರು ಮಕ್ಕಳು ಅಂತಹ…
Read Moreಜಿಲ್ಲಾ ಮಟ್ಟದಲ್ಲಿ ಮಿಂಚಿದ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು
ಕುಮಟಾ: ತಾಲೂಕಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸದಾ ಮುಂದು ಎನಿಸಿಕೊಂಡಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಅಂಕೋಲಾದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗಲ್ಲಿ ಮಿಂಚಿ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿತಂದಿರುತ್ತಾರೆ. ಕಿರಿಯರ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶ್ರೇಯಾ ಗಿರೀಶ ಹೆಬ್ಬಾರ ಭಕ್ತಿಗೀತೆ ಸ್ಫರ್ಧೆಯಲ್ಲಿ ಪ್ರಥಮ, ಆಶುಭಾಷಣ ಸ್ಪರ್ಧೆಯಲ್ಲಿ ಸ್ನೇಹಾ ಉದಯ ನಾಯ್ಕ ಪ್ರಥಮಸ್ಥಾನ ಗಳಿಸಿರುತ್ತಾರೆ. ಹಿರಿಯರ ವಿಭಾಗದ ಸ್ಫರ್ಧೆಗಳಾದ ಇಂಗ್ಲೀಷ್ ಕಂಠಪಾಠ, ಹಾಗೂ ಸಾಭಿನಯಗೀತೆಯಲ್ಲಿ ಸೃಜನಾ ದತ್ತಾ ನಾಯ್ಕ ಪ್ರಥಮ ಸ್ಥಾನ ಪಡೆದು ತೃತೀಯ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾಳೆ. ಪಲ್ಲವಿ ಶಾನಭಾಗ ತುಳು ಕಂಠಪಾಠ, ಅಕ್ಷತಾ ಶಾನಭಾಗ ಮರಾಠಿ ಕಂಠಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಸಾದನೆ ಮಾಡಿದರೆ, ಸೋನಾಲಿ ಶೇಟ್, ನಿಖಿಲ್ ಪಟಗಾರ ಇವರು ಹಿರಿಯ…
Read Moreಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮಕ್ಕೆ ನಾಂದಿ ಹಾಡಿದ ಕೊಂಕಣದ ‘ಪರಂಪರಾ ಕೂಟ’
ಕುಮಟಾ: ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ವಿನೂತನ ಪ್ರಯೋಗಗಳ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಶೈಕ್ಷಣಿಕ ಕ್ರಾಂತಿ ನಡೆಸುತ್ತಿರುವ ಕುಮಟಾದ ಪ್ರಸಿದ್ಧ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ, ರೌಪ್ಯ ಮಹೋತ್ಸವದ ಈ ಸುಸಂದರ್ಭದಲ್ಲಿ, ‘ಹಳೆ ಬೇರು-ಹೊಸ ಚಿಗುರು’ ಎಂಬ ಶೀರ್ಷಿಕೆಯಡಿಯಲ್ಲಿ ಶೈಕ್ಷಣಿಕ ಪರಿಸರದಲ್ಲಿ ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮ ಕಾರ್ಯಕ್ರಮ ಅಭೂತಪೂರ್ವವಾಗಿ ಜರುಗಿ ಯಶಸ್ವಿಯಾಯಿತು. ‘ದೀಪಾವಳಿ ಮೇಳ’ದ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ, ಶಿಕ್ಷಣ ಪ್ರೇಮಿ ಹಾಗೂ ಗುರುಪ್ರಸಾದ ಪ್ರೌಢಶಾಲೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಜಯಂತ ನಾಯ್ಕ ಉದ್ಘಾಟಿಸಿದರು. ಸಂಸ್ಥೆಯ ಕುರಿತಾಗಿ ಹೆಮ್ಮೆಯ ಮಾತಗಳನ್ನಾಡಿದ ಅವರು, ತಮ್ಮ ಮೊಮ್ಮಕ್ಕಳು ಇದೇ ಸಂಸ್ಥೆಯಲ್ಲಿ ಕಲಿಯುತ್ತಿದ್ದು ಅವರಲ್ಲಿ ಸಂಸ್ಕೃತಿ ಮೂಡುವಲ್ಲಿ ಶಿಕ್ಷಕರು ಹಾಗೂ ಸಂಸ್ಥೆಯವರ ಕಾರ್ಯ, ಕಾಳಜಿ ಶ್ಲಾಘನೀಯ ಎಂದು ನಿದರ್ಶನ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ರಜತ…
Read Moreಅತ್ಯುತ್ತಮ ಪ್ರದರ್ಶನ ತೋರಿ ಸಾಧನೆ ಮಾಡಿದ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು
ಕುಮಟಾ: ಇಲ್ಲಿನ ಶಾಸಕರ ಮಾದರಿ ಶಾಲೆ ನೆಲ್ಲಿಕೇರಿಯಲ್ಲಿ ನಡೆದ ಕುಮಟಾ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿ 10 ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಭಾಗವಹಿಸಿದ ಬಹುತೇಕ ಸ್ಪರ್ಧೆಗಳಲ್ಲಿ ಸ್ಥಾನಗಳಿಸುವ ಮೂಲಕ ಸಾಧನೆ ಮಾಡಿರುತ್ತಾರೆ. ಕಿರಿಯರ ವಿಭಾಗ ಪಲ್ಲವಿ ಶಾನಭಾಗ (ತುಳು ಕಂಠಪಾಠ ಪ್ರಥಮ), ನಿಖಿಲ ಪಟಗಾರ (ಚಿತ್ರಕಲೆ ಪ್ರಥಮ), ಶ್ರೇಯಾ ಹೆಬ್ಬಾರ (ಭಕ್ತಿ ಗೀತೆ ಪ್ರಥಮ, ಕನ್ನಡ ಕಂಠಪಾಠ ದ್ವಿತೀಯ, ಲಘುಸಂಗೀತ ದ್ವಿತೀಯ), ಸುಮುಖ ನಾಯ್ಕ (ಕ್ಲೇ ಮಾಡಲಿಂಗ ದ್ವಿತೀಯ), ಸ್ನೇಹಾ ನಾಯ್ಕ (ಆಶುಭಾಷಣ ಪ್ರಥಮ, ಮರಾಠಿ, ಹಿಂದಿ, ಕಥೆಯಲ್ಲಿ ದ್ವಿತೀಯ), ಕೃತಿಕಾ ಭಟ್ಟ (ಧಾರ್ಮಿಕ ಪಠಣ ದ್ವಿತೀಯ) ಹಾಗೂ ದೇಶಭಕ್ತಿಗೀತೆಯಲ್ಲಿ ಶ್ರೀಷಾ, ದೀಕ್ಷಾ, ಸೃಷ್ಟಿ, ಶ್ರೀಲಕ್ಷ್ಮಿ, ನಂದನ, ಕುಶಾಲರವರ ತಂಡ ಪ್ರಥಮ ಬಹುಮಾನ ಪಡೆದಿದೆ. ಸ್ನೇಹಾ, ಸಮೀರ, ಕೃತಿಕಾ, ಪುಂಡಲೀಕ, ದ್ರುವ, ವಿನುತಾರವರ ತಂಡ…
Read Moreಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು
ಕುಮಟಾ: ಕರ್ನಾಟಕ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ೨೦೧೮–೧೯ನೇ ಸಾಲಿನ ಇಲಾಖಾ ಕ್ರೀಡಾಕೂಟದಲ್ಲಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿನಾಂಕ ೦೪/೧೦/೨೦೧೮ ಗುರುವಾರ ಹೊನ್ನಾವರದ ಸೆಂಟ್ ಅಂಥೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಈ ಸಾಧನೆ ಮಾಡಿರುತ್ತಾರೆ. ಕು.ನಯನಾ ರಾಮಕೃಷ್ಣ ಭಟ್ಟ ೧೦೦ಮೀ ಓಟದಲ್ಲಿ ಹಾಗೂ ೨೦೦ಮೀ.ಓಟದಲ್ಲಿ ಪ್ರಥಮ ಸ್ಥಾನಗಳಿಸಿ ಎರಡೂ ಸ್ಪರ್ಧೆಯಲ್ಲಿಯೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲಾ ಮಟ್ಟಕ್ಕೆ ಇತಿಹಾಸ ನಿರ್ಮಿಸಿದ್ದಾಳೆ. ಅನನ್ಯಾ ಅರುಣ ಕಾಮತ ೪೦೦ಮೀ.ಓಟದಲ್ಲಿ ಪ್ರಥಮಸ್ಥಾನ ಪಡೆದು ಸಾಧನೆ ಮಾಡಿದರೆ ಗಗನ ಎನ್ ನಾಯ್ಕ ಬಾಲಕರ ೧೦೦ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ೪x೧೦೦ಮೀ ರೀಲೇಯಲ್ಲಿ ಸರಸ್ವತಿ ವಿದ್ಯಾಕೇಂದ್ರದಿಂದ ಕುಮಟಾ ತಾಲೂಕನ್ನು ಪ್ರತಿನಿಧಿಸಿದ್ದ ಅನನ್ಯಾ ಅರುಣ ಕಾಮತ,ನಯನಾ ಭಟ್ಟ,ಗಾಯತ್ರಿ ಗುನಗ,ಸೌಮ್ಯ ಪಟಗಾರ…
Read Moreಕೊಂಕಣದ ಸರಸ್ವತಿ ವಿದ್ಯಾಕೇಂದ್ರದಲ್ಲಿ ಶಾಲಾ ಸಂಸತ್ ಉದ್ಘಾಟನೆ
ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಇಂತಹ ರಾಷ್ಟ್ರದಲ್ಲಿ ನಮಗೆ ನೀಡಿದ ಹಕ್ಕುಗಳ ಜೊತೆಗೆ ನಮ್ಮ ಕರ್ತವ್ಯಗಳ ಅರಿವು ನಮಗೆ ಇರಬೇಕು.ಹಕ್ಕುಗಳನ್ನು ಚಲಾಯಿಸುವ ಭರದಲ್ಲಿ ಕರ್ತವ್ಯ ಮರೆಯಬಾರದು ಎಂದು ಶ್ರೀ ಜಯದೇವ ಒಳಗುಂಡಿ ಹೇಳಿದರು. ಅವರು ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ನಡೆದ 2018–19 ರ ಶಾಲಾ ಸಂಸತ್ ಉದ್ಘಾಟಿಸಿ ಅವರು ಮಾತನಾಡಿದರು. ಜೀವನದಲ್ಲಿ ಅತ್ಯುತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಹವ್ಯಾಸಗಳು ಉತ್ತಮವಾಗಿದ್ದರೆ ಜೀವನ ಸರಳ ಸುಂದರವಾಗುವುದು. ಆದರ್ಶ ವ್ಯಕ್ತಿತ್ವವನ್ನು ಬೆಳಿಸಿಕೊಂಡು ಜೀವನ ಸಾಗಿಸಿದರೆ ಪರರಿಗೆ ಉಪಕಾರಿಯಾಗಿ ಬದುಕಿದರೆ ಜೀವನ ಸಾರ್ಥಕವಾಗುವುದು ಎಂದರು. ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಕಲಿಸುವ ಈ ಶಾಲೆ ಸಂಸ್ಕೃತಿ ಮಂದಿರ ಸರಸ್ವತಿ ವಿದ್ಯಾಕೇಂದ್ರ. ಅದು ಸಂಸ್ಕೃತಿ ಕೇಂದ್ರ ಎಂದು ಬಣ್ಣಿಸಿದ ಅವರು ಮಕ್ಕಳು ನಾಯಕತ್ವ ಬೆಳೆಸಿಕೊಳ್ಳಲು ಮುಂದಾಗಬೇಕೆಂದು ಕರೆ ನೀಡಿದರು. ಹಣ್ಣಿನ ಬುಟ್ಟಿಯಲ್ಲಿ ಒಳಿತನ್ನು ಆರಿಸುವಂತೆ, ವಿದ್ಯಾರ್ಥಿಗಳೇ ನೈಜ ಚುನಾವಣೆಯ ಮೂಲಕ…
Read More