ಕೊಂಕಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ

Share happily:

ಕುಮಟಾ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಅಂಗಸಂಸ್ಥೆಗಳಾದ ಆರ್‌ಡಿಎಸ್‌ಎಚ್‌ ಬಾಲಮಂದಿರ, ಸರಸ್ವತಿ ವಿದ್ಯಾಕೇಂದ್ರ, ಸಿವಿಎಸ್‍ಕೆ ಪ್ರೌಢಶಾಲೆ, ಸರಸ್ವತಿ ಪ.ಪೂ. ಕಾಲೇಜ್, ಜಾನಕಿ ಪ್ರಭು ಪ್ರತಿಭಾ ಚೈತನ್ಯ ಕೇಂದ್ರ, ಸರಸ್ವತಿ ಮಾಳಪ್ಪ ಕಾಮತ ಕೃಷಿ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ ಇವುಗಳ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ವಿಠ್ಠಲ ಆರ್. ನಾಯಕ ಧ್ವಜಾರೋಹಣೆ ನೆರವೇರಿಸಿ ಧ್ವಜವಂದನೆಗೈದರು. ಕಾರ್ಯದರ್ಶಿಗಳಾದ ಮುರಳೀಧರ ಪ್ರಭು ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತ, ಇನ್ನು 25 ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ ಆಚರಿಸಲಿದ್ದೇವೆ. ಇಂದಿನ ವಿದ್ಯಾರ್ಥಿಗಳು ಭಾರತವನ್ನು ವಿಶ್ವ ಗುರುವಾಗಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕು. ನಮ್ಮೆಲ್ಲರ ಕರ್ತವ್ಯವನ್ನು ನಾವು ಸ್ಮರಿಸಬೇಕು. ಅಮೃತ ಮಹೋತ್ಸವದ ಈ ಘಳಿಗೆಯಲ್ಲಿ ‘ಡೈಮಂಡ್ ರನ್’ ಕಾರ್ಯಕ್ರಮವನ್ನು ಸಂಯೋಜಿಸಿ, ಸಂಸ್ಥೆಯ 75 ವಿದ್ಯಾರ್ಥಿಗಳು ನಗರದ ಬೀದಿಗಳಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶತಮಾನೋತ್ಸವದ ಕಡೆಗೆ ನಾವು ಚಲಿಸುತ್ತಿರುವುದನ್ನು ಅರ್ಥೈಸುವಂತೆ…

Share happily:
Read More

ಸರಸ್ವತಿ ವಿದ್ಯಾಕೇಂದ್ರದಲ್ಲಿ ಪುಟಾಣಿ ವಿಜ್ಞಾನಿಗಳಿಂದ ವಿಜ್ಞಾನ ದಿನ ಆಚರಣೆ

Share happily:

ಕುಮಟಾ: 1928 ರ ಫೆಬ್ರವರಿ 28 ರಂದು ಮಹಾನ್ ವಿಜ್ಞಾನಿ ಸರ್.ಸಿ.ವಿ.ರಾಮನ್ ಅವರು ವಿಶ್ವ ಪ್ರಸಿದ್ಧವಾದ “ರಾಮನ್ ಎಫೆಕ್ಟ”ನ್ನು ಜಗತ್ತಿಗೆ ಬಹಿರಂಗ ಪಡಿಸಿದರು. ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನದ ವಿಶೇಷವಾಗಿ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದಲ್ಲಿ ಪುಟಾಣಿಗಳೇ ವಿಜ್ಞಾನಿಗಳ ವೇಷ ಧರಿಸಿ ಆಯಾ ವಿಜ್ಞಾನಿಗಳ ಸಂಶೋಧನೆ ಆವಿಷ್ಕಾರಗಳ ಕುರಿತಾಗಿ ಬೆಳಕು ಚೆಲ್ಲುವ ಮೂಲಕ ಅರ್ಥಪೂರ್ಣವಾಗಿ ವಿಜ್ಞಾನ ದಿನವನ್ನು ಆಚರಿಸಿದರು. ಆಕಾಶ ನಾಯಕ ಸರ್.ಸಿ.ವಿ.ರಾಮನ್ ಪಾತ್ರದಲ್ಲಿ ಬಂದು ರಾಮನ್ ಎಫೆಕ್ಟ ಬಗ್ಗೆ ವಿವರಿಸಿ ಎಲ್ಲರನ್ನು ಮೆಚ್ಚಿಸಿದರೆ, ಚಂದನ ಹೆಗಡೆ ಜಗದೀಶ ಚಂದ್ರ ಬೋಸ್ ಆಗಿ, ವಿರಾಜ್ ಎಂ.ವಿಶ್ವೇಶ್ವರಯ್ಯರ ವೇಶ ತೊಟ್ಟು, ಸುದರ್ಶನ ಹೆಗಡೆ ವಿಕ್ರಂ ಸಾರಾಭಾಯಿಯ ರೂಪದಲ್ಲಿ ಹಾಗೂ ಮಯೂರ್ ನಾಯ್ಕ ಸಲೀಂ ಅಲಿಯಾಗಿ ಮಿಂಚಿ ವೈಜ್ಞಾನಿಕ ಲೋಕದ ಅಚ್ಚರಿಗಳನ್ನು ಸಭೆಗೆ ಪರಿಚಯಿಸಿದರು. ವಿಜ್ಞಾನ ಶಿಕ್ಷಕರುಗಳಾದ ಶ್ರೀಮತಿ ಉಷಾ ಭಟ್ಟ, ಮಹೇಶ್ವರಿ…

Share happily:
Read More

ಕೊಂಕಣ ಎಜ್ಯುಕೇಶನ್ ಟ್ರಸ್ಟನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Share happily:

ಕುಮಟಾ: ಸಂಸ್ಕಾರ ಹಾಗೂ ಸಂಪ್ರದಾಯದ ತಳಹದಿಯಲ್ಲಿ ಶಿಕ್ಷಣ ನೀಡಬೇಕು ಎಂಬ ಘನ ಉದ್ದೇಶ ಹೊತ್ತು ಮುನ್ನಡೆಯುತ್ತಿರುವ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಮಾತೃಮಂಡಳಿಯ ಸಹಯೋಗದಲ್ಲಿ ಡಾ. ಆರತಿ ವಿ. ಬಿ. ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಕೃತಿಯ ಸೌಂದರ್ಯ ಇರುವುದು ಸ್ತ್ರೀಯಲ್ಲಿ ಎಂಬುದು ಮಾತು ಸತ್ಯ, ಪ್ರತಿಯೊಂದರಲ್ಲಿಯೂ ಸುಂದರತೆ ಕಾಣುವ ಮಾತೆಯರಿಂದ ಮಾತ್ರವೇ ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ವಿವರಿಸಿದ ಅವರು ಪುರುಷರಲ್ಲಿ ಹಾಗೂ ಸ್ತ್ರೀಯರಲ್ಲಿ ಅನೇಕ ವಿಧದ ವೈಶಿಷ್ಟ್ಯಗಳು ಇರುತ್ತವೆ. ನಾವು ನಾವಾಗಿಯೇ ಇರಬೇಕು. ಪುರುಷ ಸ್ತ್ರೀ ಆಗಲು ಪ್ರಯತ್ನಿಸಲಾಗದು, ಸ್ತ್ರೀ ಪುರುಷರಂತೆ ಆಗಲು ಪ್ರಯತ್ನಿಸುತ್ತಿರುವುದು ಹುಚ್ಚುತನ ಮಾತೃತ್ವ ಇರುವುದು ಸ್ತ್ರೀಯರಲ್ಲಿ, ಸ್ತ್ರೀ ಎಂಬುದೊಂದು ಶಕ್ತಿ ಯಾವ ಸ್ತ್ರೀ ತನ್ನೊಳಗಿನ ವಿದ್ಯೆ, ವಿಜ್ಞಾನ, ಕೌಶಲ, ಮಾತೃತ್ವವನ್ನು ಜಗತ್ತಿಗೆ ಕೊಟ್ಟಾಗ ಎಲ್ಲರೂ ನಮ್ಮನ್ನು ಮಾತೆಯರು ಎನ್ನುವರು. ತ್ಯಾಗ ಮಾಡುವ ಬಗ್ಗೆ ಕಲಿಸಿದವರು ಮಕ್ಕಳು ಅಂತಹ…

Share happily:
Read More

ಜಿಲ್ಲಾ ಮಟ್ಟದಲ್ಲಿ ಮಿಂಚಿದ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು

Share happily:

ಕುಮಟಾ: ತಾಲೂಕಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸದಾ ಮುಂದು ಎನಿಸಿಕೊಂಡಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಅಂಕೋಲಾದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗಲ್ಲಿ ಮಿಂಚಿ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿತಂದಿರುತ್ತಾರೆ. ಕಿರಿಯರ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶ್ರೇಯಾ ಗಿರೀಶ ಹೆಬ್ಬಾರ ಭಕ್ತಿಗೀತೆ ಸ್ಫರ್ಧೆಯಲ್ಲಿ ಪ್ರಥಮ, ಆಶುಭಾಷಣ ಸ್ಪರ್ಧೆಯಲ್ಲಿ ಸ್ನೇಹಾ ಉದಯ ನಾಯ್ಕ ಪ್ರಥಮಸ್ಥಾನ ಗಳಿಸಿರುತ್ತಾರೆ. ಹಿರಿಯರ ವಿಭಾಗದ ಸ್ಫರ್ಧೆಗಳಾದ ಇಂಗ್ಲೀಷ್‍ ಕಂಠಪಾಠ, ಹಾಗೂ ಸಾಭಿನಯಗೀತೆಯಲ್ಲಿ ಸೃಜನಾ ದತ್ತಾ ನಾಯ್ಕ ಪ್ರಥಮ ಸ್ಥಾನ ಪಡೆದು ತೃತೀಯ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ್ದಾಳೆ. ಪಲ್ಲವಿ ಶಾನಭಾಗ ತುಳು ಕಂಠಪಾಠ, ಅಕ್ಷತಾ ಶಾನಭಾಗ ಮರಾಠಿ ಕಂಠಪಾಠದಲ್ಲಿ ದ್ವಿತೀಯ ಸ್ಥಾನ ಪಡೆದು ಸಾದನೆ ಮಾಡಿದರೆ, ಸೋನಾಲಿ ಶೇಟ್, ನಿಖಿಲ್ ಪಟಗಾರ ಇವರು ಹಿರಿಯ…

Share happily:
Read More

ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮಕ್ಕೆ ನಾಂದಿ ಹಾಡಿದ ಕೊಂಕಣದ ‘ಪರಂಪರಾ ಕೂಟ’

Share happily:

ಕುಮಟಾ: ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ವಿನೂತನ ಪ್ರಯೋಗಗಳ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಶೈಕ್ಷಣಿಕ ಕ್ರಾಂತಿ ನಡೆಸುತ್ತಿರುವ ಕುಮಟಾದ ಪ್ರಸಿದ್ಧ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ, ರೌಪ್ಯ ಮಹೋತ್ಸವದ ಈ ಸುಸಂದರ್ಭದಲ್ಲಿ, ‘ಹಳೆ ಬೇರು-ಹೊಸ ಚಿಗುರು’ ಎಂಬ ಶೀರ್ಷಿಕೆಯಡಿಯಲ್ಲಿ ಶೈಕ್ಷಣಿಕ ಪರಿಸರದಲ್ಲಿ ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮ ಕಾರ್ಯಕ್ರಮ ಅಭೂತಪೂರ್ವವಾಗಿ ಜರುಗಿ ಯಶಸ್ವಿಯಾಯಿತು. ‘ದೀಪಾವಳಿ ಮೇಳ’ದ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ, ಶಿಕ್ಷಣ ಪ್ರೇಮಿ ಹಾಗೂ ಗುರುಪ್ರಸಾದ ಪ್ರೌಢಶಾಲೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಜಯಂತ ನಾಯ್ಕ ಉದ್ಘಾಟಿಸಿದರು. ಸಂಸ್ಥೆಯ ಕುರಿತಾಗಿ ಹೆಮ್ಮೆಯ ಮಾತಗಳನ್ನಾಡಿದ ಅವರು, ತಮ್ಮ ಮೊಮ್ಮಕ್ಕಳು ಇದೇ ಸಂಸ್ಥೆಯಲ್ಲಿ ಕಲಿಯುತ್ತಿದ್ದು ಅವರಲ್ಲಿ ಸಂಸ್ಕೃತಿ ಮೂಡುವಲ್ಲಿ ಶಿಕ್ಷಕರು ಹಾಗೂ ಸಂಸ್ಥೆಯವರ ಕಾರ್ಯ, ಕಾಳಜಿ ಶ್ಲಾಘನೀಯ ಎಂದು ನಿದರ್ಶನ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ರಜತ…

Share happily:
Read More

ಅತ್ಯುತ್ತಮ ಪ್ರದರ್ಶನ ತೋರಿ ಸಾಧನೆ ಮಾಡಿದ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು

Share happily:

ಕುಮಟಾ: ಇಲ್ಲಿನ ಶಾಸಕರ ಮಾದರಿ ಶಾಲೆ ನೆಲ್ಲಿಕೇರಿಯಲ್ಲಿ ನಡೆದ ಕುಮಟಾ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿ 10 ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಭಾಗವಹಿಸಿದ ಬಹುತೇಕ ಸ್ಪರ್ಧೆಗಳಲ್ಲಿ ಸ್ಥಾನಗಳಿಸುವ ಮೂಲಕ ಸಾಧನೆ ಮಾಡಿರುತ್ತಾರೆ. ಕಿರಿಯರ ವಿಭಾಗ ಪಲ್ಲವಿ ಶಾನಭಾಗ (ತುಳು ಕಂಠಪಾಠ ಪ್ರಥಮ), ನಿಖಿಲ ಪಟಗಾರ (ಚಿತ್ರಕಲೆ ಪ್ರಥಮ), ಶ್ರೇಯಾ ಹೆಬ್ಬಾರ (ಭಕ್ತಿ ಗೀತೆ ಪ್ರಥಮ, ಕನ್ನಡ ಕಂಠಪಾಠ ದ್ವಿತೀಯ, ಲಘುಸಂಗೀತ ದ್ವಿತೀಯ), ಸುಮುಖ ನಾಯ್ಕ (ಕ್ಲೇ ಮಾಡಲಿಂಗ ದ್ವಿತೀಯ), ಸ್ನೇಹಾ ನಾಯ್ಕ (ಆಶುಭಾಷಣ ಪ್ರಥಮ, ಮರಾಠಿ, ಹಿಂದಿ, ಕಥೆಯಲ್ಲಿ ದ್ವಿತೀಯ), ಕೃತಿಕಾ ಭಟ್ಟ (ಧಾರ್ಮಿಕ ಪಠಣ ದ್ವಿತೀಯ) ಹಾಗೂ ದೇಶಭಕ್ತಿಗೀತೆಯಲ್ಲಿ ಶ್ರೀಷಾ, ದೀಕ್ಷಾ, ಸೃಷ್ಟಿ, ಶ್ರೀಲಕ್ಷ್ಮಿ, ನಂದನ, ಕುಶಾಲರವರ ತಂಡ ಪ್ರಥಮ ಬಹುಮಾನ ಪಡೆದಿದೆ. ಸ್ನೇಹಾ, ಸಮೀರ, ಕೃತಿಕಾ, ಪುಂಡಲೀಕ, ದ್ರುವ, ವಿನುತಾರವರ ತಂಡ…

Share happily:
Read More

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು

Share happily:

ಕುಮಟಾ: ಕರ್ನಾಟಕ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ೨೦೧೮–೧೯ನೇ ಸಾಲಿನ ಇಲಾಖಾ ಕ್ರೀಡಾಕೂಟದಲ್ಲಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿನಾಂಕ ೦೪/೧೦/೨೦೧೮ ಗುರುವಾರ ಹೊನ್ನಾವರದ ಸೆಂಟ್ ಅಂಥೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಈ ಸಾಧನೆ ಮಾಡಿರುತ್ತಾರೆ. ಕು.ನಯನಾ ರಾಮಕೃಷ್ಣ ಭಟ್ಟ ೧೦೦ಮೀ ಓಟದಲ್ಲಿ ಹಾಗೂ ೨೦೦ಮೀ.ಓಟದಲ್ಲಿ ಪ್ರಥಮ ಸ್ಥಾನಗಳಿಸಿ ಎರಡೂ ಸ್ಪರ್ಧೆಯಲ್ಲಿಯೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲಾ ಮಟ್ಟಕ್ಕೆ ಇತಿಹಾಸ ನಿರ್ಮಿಸಿದ್ದಾಳೆ. ಅನನ್ಯಾ ಅರುಣ ಕಾಮತ ೪೦೦ಮೀ.ಓಟದಲ್ಲಿ ಪ್ರಥಮಸ್ಥಾನ ಪಡೆದು ಸಾಧನೆ ಮಾಡಿದರೆ ಗಗನ ಎನ್ ನಾಯ್ಕ ಬಾಲಕರ ೧೦೦ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ೪x೧೦೦ಮೀ ರೀಲೇಯಲ್ಲಿ ಸರಸ್ವತಿ ವಿದ್ಯಾಕೇಂದ್ರದಿಂದ ಕುಮಟಾ ತಾಲೂಕನ್ನು ಪ್ರತಿನಿಧಿಸಿದ್ದ ಅನನ್ಯಾ ಅರುಣ ಕಾಮತ,ನಯನಾ ಭಟ್ಟ,ಗಾಯತ್ರಿ ಗುನಗ,ಸೌಮ್ಯ ಪಟಗಾರ…

Share happily:
Read More

ಕೊಂಕಣದ ಸರಸ್ವತಿ ವಿದ್ಯಾಕೇಂದ್ರದಲ್ಲಿ ಶಾಲಾ ಸಂಸತ್ ಉದ್ಘಾಟನೆ

Share happily:

ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಇಂತಹ ರಾಷ್ಟ್ರದಲ್ಲಿ ನಮಗೆ ನೀಡಿದ ಹಕ್ಕುಗಳ ಜೊತೆಗೆ ನಮ್ಮ ಕರ್ತವ್ಯಗಳ ಅರಿವು ನಮಗೆ ಇರಬೇಕು.ಹಕ್ಕುಗಳನ್ನು ಚಲಾಯಿಸುವ ಭರದಲ್ಲಿ ಕರ್ತವ್ಯ ಮರೆಯಬಾರದು ಎಂದು ಶ್ರೀ ಜಯದೇವ ಒಳಗುಂಡಿ ಹೇಳಿದರು. ಅವರು ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ನಡೆದ 2018–19 ರ ಶಾಲಾ ಸಂಸತ್ ಉದ್ಘಾಟಿಸಿ ಅವರು ಮಾತನಾಡಿದರು. ಜೀವನದಲ್ಲಿ ಅತ್ಯುತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಹವ್ಯಾಸಗಳು ಉತ್ತಮವಾಗಿದ್ದರೆ ಜೀವನ ಸರಳ ಸುಂದರವಾಗುವುದು. ಆದರ್ಶ ವ್ಯಕ್ತಿತ್ವವನ್ನು ಬೆಳಿಸಿಕೊಂಡು ಜೀವನ ಸಾಗಿಸಿದರೆ ಪರರಿಗೆ ಉಪಕಾರಿಯಾಗಿ ಬದುಕಿದರೆ ಜೀವನ ಸಾರ್ಥಕವಾಗುವುದು ಎಂದರು. ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಕಲಿಸುವ ಈ ಶಾಲೆ ಸಂಸ್ಕೃತಿ ಮಂದಿರ ಸರಸ್ವತಿ ವಿದ್ಯಾಕೇಂದ್ರ. ಅದು ಸಂಸ್ಕೃತಿ ಕೇಂದ್ರ ಎಂದು ಬಣ್ಣಿಸಿದ ಅವರು ಮಕ್ಕಳು ನಾಯಕತ್ವ ಬೆಳೆಸಿಕೊಳ್ಳಲು ಮುಂದಾಗಬೇಕೆಂದು ಕರೆ ನೀಡಿದರು. ಹಣ್ಣಿನ ಬುಟ್ಟಿಯಲ್ಲಿ ಒಳಿತನ್ನು ಆರಿಸುವಂತೆ, ವಿದ್ಯಾರ್ಥಿಗಳೇ ನೈಜ ಚುನಾವಣೆಯ ಮೂಲಕ…

Share happily:
Read More

ತಾಲೂಕಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆ

Share happily:

ದಿನಾಂಕ 08-09-2017 ರಂದು ನಡೆದ ಕುಮಟಾ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ಶಾಲಾ ಹಿರಿಯ ಹಾಗೂ ಕಿರಿಯ ವಿಭಾಗದ ಸ್ಪರ್ಧೆಯಲ್ಲಿ ಕೊಂಕಣ ಎಜ್ಯುಕೇಶನ ಟ್ರಸ್ಟನ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಭಾಗವಹಿಸಿದ 20 ವಿಧದ ಸ್ಪರ್ಧೆಯಲ್ಲಿ 14ರಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸೃಜನಾ ಡಿ.ನಾಯಕ (ಇಂಗ್ಲೀಷ ಕಥೆ ಹೇಳುವುದು,ಅಭಿನಯ ಗೀತೆ)ಅಕ್ಷತಾ ಎಸ್.ಭಟ್ಟ (ಕನ್ನಡ ಕಂಠಪಾಠ),ಕನ್ನಿಕಾ ಆರ್ ಭಟ್ಟ(ಹಿಂದಿ ಕಂಠಪಾಠ),ಶ್ರಾವಣಿ ಎಮ್ ಪೂಜೇರಿ (ಛದ್ಮ ವೇಷ),ವಿಘ್ನೇಶ ಹೊಸಮನೆ(ಚಿತ್ರಕಲೆ),ಶುಭಾ ವಿಷ್ಣು ನಾಯ್ಕ(ಕಥೆ ಹೇಳುವುದು,ಅಭಿನಯ ಗೀತೆ),ಜೀವನ ಪ್ರಕಾಶ ನಾಯ್ಕ(ಕ್ಲೇ ಮಾಡಲಿಂಗ್) ಆಶ್ರೀತಾ ಜಿ ಭಟ್ಟ (ಭಕ್ತಿಗೀತೆ),ಸ್ನೇಹಾ ಉದಯ ನಾಯ್ಕ (ಆಶುಭಾಷಣ)ಚಂದನ ಹೆಗq, ವಿಶೇಷ ಕಾಮತ (ಕ್ವಿಜ್) ಗೌರವ ಶ್ರವಣ ಭಟ್ಟ ,ಸಮೀರ ದಿವಾಣ, ಶ್ರೇಯಾ ಹೆಬ್ಬಾರ,ಸಂಜನಾ ಪಂಡಿತ, ವಿನುತಾ ನಾಯ್ಕ, ಸ್ನೇಹಾ ನಾಯ್ಕ,(ದೇಶಭಕ್ತಿಗೀತೆ)ಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶ್ರೇಯಾ ಹೆಬ್ಬಾರ(ಕನ್ನಡ…

Share happily:
Read More

ಅಂತರಾಷ್ಟ್ರೀಯಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ ಪಡೆದ ಅಭಿರಾಮ ಎ.ಎನ್.

Share happily:

ಕುಮಟಾದ ಬಾಡ ಗ್ರಾಮದ ನಿವಾಸಿ ಪ್ರಸ್ತುತ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾ ಕೇಂದ್ರದಲ್ಲಿ ಏಳನೇ ವರ್ಗದಲ್ಲಿ ಓದುತ್ತಿರುವ ಅಭಿರಾಮ ಎ.ಎನ್ ಈತನು ಹೈದ್ರಾಬಾದಿನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟಾ ಕ್ರೀಡಾಕೂಟದಲ್ಲಿ ಕಟಾದಲ್ಲಿ ಚಿನ್ನದ ಪದಕ ಹಾಗೂ ಗ್ರಾಂಡ್ ಚಾಂಪಿಯನ್ ಕುಮಿಟೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾನೆ. ಇವನು ಕರಾಟೆ ಶಿಕ್ಷಕರಾದ ಅರವಿಂದ ನಾಯ್ಕ ಅವರಿಂದ ಕರಾಟೆ ಅಭ್ಯಾಸ ನಡೆಸಿರುತ್ತಾನೆ. ಇವನ ಸಾಧನೆಗೆ ಶಾಲಾ ಆಡಳಿತಮಂಡಳಿಯವರು, ಮುಖ್ಯಶಿಕ್ಷಕರು, ಶಿಕ್ಷಕವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Share happily:
Read More