ಕುಮಟಾ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಂಗಸಂಸ್ಥೆಗಳಾದ ಆರ್ಡಿಎಸ್ಎಚ್ ಬಾಲಮಂದಿರ, ಸರಸ್ವತಿ ವಿದ್ಯಾಕೇಂದ್ರ, ಸಿವಿಎಸ್ಕೆ ಪ್ರೌಢಶಾಲೆ, ಸರಸ್ವತಿ ಪ.ಪೂ. ಕಾಲೇಜ್, ಜಾನಕಿ ಪ್ರಭು ಪ್ರತಿಭಾ ಚೈತನ್ಯ ಕೇಂದ್ರ, ಸರಸ್ವತಿ ಮಾಳಪ್ಪ ಕಾಮತ ಕೃಷಿ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ ಇವುಗಳ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ವಿಠ್ಠಲ ಆರ್. ನಾಯಕ ಧ್ವಜಾರೋಹಣೆ ನೆರವೇರಿಸಿ ಧ್ವಜವಂದನೆಗೈದರು. ಕಾರ್ಯದರ್ಶಿಗಳಾದ ಮುರಳೀಧರ ಪ್ರಭು ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತ, ಇನ್ನು 25 ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ ಆಚರಿಸಲಿದ್ದೇವೆ. ಇಂದಿನ ವಿದ್ಯಾರ್ಥಿಗಳು ಭಾರತವನ್ನು ವಿಶ್ವ ಗುರುವಾಗಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕು. ನಮ್ಮೆಲ್ಲರ ಕರ್ತವ್ಯವನ್ನು ನಾವು ಸ್ಮರಿಸಬೇಕು. ಅಮೃತ ಮಹೋತ್ಸವದ ಈ ಘಳಿಗೆಯಲ್ಲಿ ‘ಡೈಮಂಡ್ ರನ್’ ಕಾರ್ಯಕ್ರಮವನ್ನು ಸಂಯೋಜಿಸಿ, ಸಂಸ್ಥೆಯ 75 ವಿದ್ಯಾರ್ಥಿಗಳು ನಗರದ ಬೀದಿಗಳಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶತಮಾನೋತ್ಸವದ ಕಡೆಗೆ ನಾವು ಚಲಿಸುತ್ತಿರುವುದನ್ನು ಅರ್ಥೈಸುವಂತೆ…
Read MoreCategory: RDSH
ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮಕ್ಕೆ ನಾಂದಿ ಹಾಡಿದ ಕೊಂಕಣದ ‘ಪರಂಪರಾ ಕೂಟ’
ಕುಮಟಾ: ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ವಿನೂತನ ಪ್ರಯೋಗಗಳ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಶೈಕ್ಷಣಿಕ ಕ್ರಾಂತಿ ನಡೆಸುತ್ತಿರುವ ಕುಮಟಾದ ಪ್ರಸಿದ್ಧ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ, ರೌಪ್ಯ ಮಹೋತ್ಸವದ ಈ ಸುಸಂದರ್ಭದಲ್ಲಿ, ‘ಹಳೆ ಬೇರು-ಹೊಸ ಚಿಗುರು’ ಎಂಬ ಶೀರ್ಷಿಕೆಯಡಿಯಲ್ಲಿ ಶೈಕ್ಷಣಿಕ ಪರಿಸರದಲ್ಲಿ ಮೊಮ್ಮಕ್ಕಳೊಂದಿಗೆ ಹಿರಿಯ ಚೇತನಗಳ ಅಪೂರ್ವ ಸಂಗಮ ಕಾರ್ಯಕ್ರಮ ಅಭೂತಪೂರ್ವವಾಗಿ ಜರುಗಿ ಯಶಸ್ವಿಯಾಯಿತು. ‘ದೀಪಾವಳಿ ಮೇಳ’ದ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಿಗ್ಗೆ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ, ಶಿಕ್ಷಣ ಪ್ರೇಮಿ ಹಾಗೂ ಗುರುಪ್ರಸಾದ ಪ್ರೌಢಶಾಲೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಜಯಂತ ನಾಯ್ಕ ಉದ್ಘಾಟಿಸಿದರು. ಸಂಸ್ಥೆಯ ಕುರಿತಾಗಿ ಹೆಮ್ಮೆಯ ಮಾತಗಳನ್ನಾಡಿದ ಅವರು, ತಮ್ಮ ಮೊಮ್ಮಕ್ಕಳು ಇದೇ ಸಂಸ್ಥೆಯಲ್ಲಿ ಕಲಿಯುತ್ತಿದ್ದು ಅವರಲ್ಲಿ ಸಂಸ್ಕೃತಿ ಮೂಡುವಲ್ಲಿ ಶಿಕ್ಷಕರು ಹಾಗೂ ಸಂಸ್ಥೆಯವರ ಕಾರ್ಯ, ಕಾಳಜಿ ಶ್ಲಾಘನೀಯ ಎಂದು ನಿದರ್ಶನ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ರಜತ…
Read Moreರಂಗಾ ದಾಸ ಶಾನಭಾಗ ಹೆಗಡೆಕರ ಬಾಲಮಂದಿರದ ಪುಟಾಣಿಗಳ ಪ್ರತಿಭಾ ಪ್ರದರ್ಶನ
ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ರಂಗಾ ದಾಸ ಶಾನಭಾಗ ಹೆಗಡೆಕರ ಬಾಲಮಂದಿರದ ಮಕ್ಕಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ನರ್ಸರಿ, ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳು ಕೃಷ್ಣ ವೇಷ, ಹನುಮಂತನ ವೇಷ, ಬುಡಬುಡಕಿದಾಸ, ಬಳೆಗಾರನ ವೇಷ ಮುಂತಾದ ವೇಷಭೂಷಣ ಮಾಡಿ ಜನರಿಂದ ಮೆಚ್ಚುಗೆ ಗಳಿಸಿದರು.ನೃತ್ಯ, ಹಾಡು, ಕಥೆಗಳನ್ನು ಹೇಳಿ ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹೊಮ್ಮಿಸಿದರು. ಮುಖ್ಯಾಧ್ಯಾಪಕರು, ಶಿಕ್ಷಕವೃಂದ ಹಾಗೂ ಶೈಕ್ಷಣಿಕ ಸಲಹೆಗಾರರಾದ ಶ್ರೀ.ಆರ್.ಎಸ್.ದೇಶಭಂಡಾರಿಯವರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದು ಮಕ್ಕಳ ಪ್ರತಿಭೆಯ ಅನಾವರಣವನ್ನು ಕಣ್ತುಂಬಿಕೊಂಡರು.
Read More