ಇತ್ತೀಚೆಗೆ ಕುಮಟಾ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ಪಿ.ಯು. ಕಾಲೇಜಿನ ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು. ಅತಿಥಿಗಳಾಗಿ ಶಿವಮೊಗ್ಗದ ರೆಸಿಡೆಂಟ್ ಸರ್ಜನ್ ಮತ್ತು ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಹಳೇ ವಿದ್ಯಾರ್ಥಿಯಾದ ಡಾ. ಮಧುಕರ ನಾಯ್ಡು ಅವರು ಆಗಮಿಸಿದ್ದರು. ಪ್ರಾಂಶುಪಾಲರಾದ ಡಾ. ಸುಲೋಚನಾ ರಾವ್.ಬಿ ಸ್ವಾಗತಿಸಿದರು. ಪ್ರಾಸ್ತವಿಕವಾಗಿ ಮಾತನಾಡಿದ ಕಾರ್ಯದರ್ಶಿಗಳಾದ ಶ್ರೀ ಮುರಳೀಧರ ಪ್ರಭುರವರು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹಳೇ ವಿದ್ಯಾರ್ಥಿಯಾದ ಡಾ. ಮಧುಕರ ನಾಯ್ಡು ಅವರ ಅಮೋಘ ಸಾಧನೆಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರು ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮತ್ತು ತಮ್ಮ ಸಾಧನೆಗೆ ಕಾರಣವಾದ ಹಲವೊಂದು ಅಂಶಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವ ಮೂಲಕ ಅವರ ಮುಂದಿನ ಗುರಿಯನ್ನು ಸ್ಪಷ್ಟ ಪಡಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರೆ, ಉಪನ್ಯಾಸಕರು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಬಗ್ಗೆ ಮತ್ತು ಪರೀಕ್ಷೆಯಲ್ಲಿ…
Read MoreMonth: February 2018
ಸಿ.ವಿ.ಎಸ್.ಕೆ ಪ್ರೌಢಶಾಲೆಯ ಶಿಕ್ಷಕರಿಗೆ ಸನ್ಮಾನ
ಅಪರ ಆಯುಕ್ತಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಡಾ. ಎಚ್. ಎಫ್. ಕಟ್ಟೀಮನಿ ಪ್ರೌಢಶಿಕ್ಷಣ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಹೊನ್ನಾವರದ ನ್ಯೂ-ಇಂಗ್ಲೀಷ್ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ, 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನಲ್ಲಿಯೇ ವಿಷಯವಾರು ಗರಿಷ್ಠ ಶೇಕಡಾವಾರು ಸರಾಸರಿ ಅಂಕಗಳನ್ನು ದಾಖಲಿಸಿದÀ ಕುಮಟಾದ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ನಾಲ್ಕು ವಿಷಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ವಿಷಯವಾರು ಬೋಧನೆಯ ಅನುಸಾರÀ ಇಂಗ್ಲೀಷ್ ವಿಷಯದಲ್ಲಿ ಶ್ರೀಮತಿ ವಿನಯಾ ನಾಯಕ ಶೇ.91À, ಸಮಾಜ ವಿಜ್ಞಾನ ವಿಷಯದಲ್ಲಿ ಶ್ರೀ ಪ್ರಕಾಶ ಗಾವಡಿ ಶೇ.89, ಗಣಿತ ವಿಷಯದಲ್ಲಿ ಶ್ರೀ ರಾಜೇಶ ಎಚ್.ಜಿ ಶೇ.86, ಹಾಗೂ ವಿಜ್ಞಾನ ವಿಷಯದಲ್ಲಿ ಸೌಖ್ಯಾ ಶೇಟ್ ಶೇ.83 ಸರಾಸರಿ ಶೇಕಡಾವಾರು ಅಂಕ ಗಳಿಸಲು ಶ್ರಮಿಸಿದ ಈ ಶಿಕ್ಷಕರುಗಳನ್ನು ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿನ ಒಟ್ಟೂ…
Read Moreವಿದ್ಯಾರ್ಥಿ ವೇತನ & ಸಜ್ಜನಿ ಪುರಸ್ಕಾರ ಪ್ರದಾನ ಸಮಾರಂಭ
Scholarship and Sajjani Award presentation ceremony was recently held for poor meritorious students studying in the Konkan Education Trust affiliates. Programme was inaugurated by the retired professor Mrs. Geeta Nayak. She spoke of the need for behavioural conversion and cultural education in today’s life and also its significance in our daily life proceedings. She explained unique features of Sajjani Award and the process of difficulty in selecting students for awarding such a great honour. Further adding to her speech, she indeed explicated the importance of such scholarship programme. The retired…
Read MoreSSLC ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಾಗಾರ
ಇಲ್ಲಿನ ಕೊಂಕಣ ಎಜ್ಯುಕೇಶನ್ ಸಂಸ್ಥೆಯು ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳಲ್ಲಿರಬಹುದಾದ ಸಂಶಯಗಳಿಗೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಎರಡು ದಿನಗಳ ತಾಲೂಕಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಇ.ಮುಲ್ಲಾರವರು, ಅತ್ಯುತ್ತಮ ಶೈಕ್ಷಣಿಕ ಕಾರ್ಯಾಗಾರ ಇದಾಗಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡು, ರಾಜ್ಯಮಟ್ಟದಲ್ಲಿ ಕುಮಟಾವನ್ನು ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕೊಂಕಣ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಶೇಷಗಿರಿ ಶಾನಭಾಗ ವಹಿಸಿದ್ದರು. ನಂತರ ಮಾತನಾಡಿದ ಅವರು, ಸಮಯದ ಸದುಪಯೋಗ ಹಾಗೂ ಅತೀ ಹೆಚ್ಚು ಅಂಕ ಪಡೆದು ಕೀರ್ತಿ ತರುವಂತಹ ಶೈಕ್ಷಣಿಕ ಕಾರ್ಯಾಗಾರ ಇದಾಗಿದ್ದು ಇದರ ಲಾಭ ಪಡೆದುಕೊಳ್ಳಲು ಕರೆ ನೀಡಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಚ್.ಎನ್.ಪೈ, ವಾಸುದೇವ ನಾಯ್ಕ, ಶಿಕ್ಷಕ ಸಂಘದ ಕಾರ್ಯದರ್ಶಿಗಳಾದ ದಯಾನಂದ ಭಂಡಾರಿ, ಪ್ರಾಚಾರ್ಯೆ ಸುಲೋಚನಾ ರಾವ್, ಅರ್ಜುನ್ ಅಕಾಡೆಮಿ ಸಂಸ್ಥೆಯ ಸೂರ್ಯಕಾಂತ, ಶ್ರೀವತ್ಸ,…
Read Moreಕೊಂಕಣಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ
ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲಾ ಸಭಾಭವನದಲ್ಲಿ ದಿ. ಮಾಧವ ಮಂಜುನಾಥ ಶಾನಭಾಗ ಸ್ಮರಣಾರ್ಥ ದತ್ತಿ ನಿಧಿ ಕೊಂಕಣಿ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಮುಕುಂದ ಪೈ, ನಿವೃತ್ತ ಆರ್ಥಿಕ ಸಲಹೆಗಾರರು (ಯುಎಸ್ಎ) ಇವರು ಉದ್ಘಾಟಿಸಿ, ಕೊಂಕಣಿ ಭಾಷೆಯನ್ನು ಉಳಿಸಿ-ಬೆಳೆಸಲು ಕರೆ ನೀಡಿ, ಕೊಂಕಣಿ ಭಾಷೆ ವಿಶ್ವವ್ಯಾಪಿಯಾಗಬೇಕೆಂದು ನುಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಗೌರವಾಧ್ಯಕ್ಷರಾದ ಶ್ರೀ ಕಾಶಿನಾಥ ನಾಯಕ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳು ಹೆಚ್ಚು-ಹೆಚ್ಚಾಗಿ ಆಯೋಜಿಸಿ, ಮಕ್ಕಳಲ್ಲಿ ಕೊಂಕಣಿ ಭಾಷೆಯ ಅಭಿಮಾನ ಮೂಡಿಸಿ, ಇಂತಹ ಸವಿಯಾದ ಚೆಂದದ ಭಾಷೆಯನ್ನು ಉಳಿಸಿ ಬೆಳೆಸಬೇಕಾದದ್ದು ನಮ್ಮ ಆದ್ಯ ಕರ್ತವ್ಯವಾಗಬೇಕಾಗಿದೆಯೆಂದು ಸಲಹೆ ನೀಡಿದರು. ಟ್ರಸ್ಟಿನ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ಮುರಲೀಧರ ಪ್ರಭು ಪ್ರಾಸ್ತಾವಿಕ ಮಾತುಗಳನ್ನಾಡಿ, ದಿ. ಮಾಧವ ಮಂಜುನಾಥ ಶಾನಭಾಗ ರನ್ನು ಸ್ಮರಿಸುತ್ತ ಅವರು ಕೊಂಕಣಿ ಭಾಷೆಗೆ ನೀಡಿದ ಕೊಡುಗೆಯನ್ನು ನೆನೆಯುತ್ತ, ಮಾತೃ…
Read More