ಕುಮಟಾ: ಕರ್ನಾಟಕ ಸರಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ೨೦೧೮–೧೯ನೇ ಸಾಲಿನ ಇಲಾಖಾ ಕ್ರೀಡಾಕೂಟದಲ್ಲಿ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಅಮೋಘ ಸಾಧನೆಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದಿನಾಂಕ ೦೪/೧೦/೨೦೧೮ ಗುರುವಾರ ಹೊನ್ನಾವರದ ಸೆಂಟ್ ಅಂಥೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಈ ಸಾಧನೆ ಮಾಡಿರುತ್ತಾರೆ. ಕು.ನಯನಾ ರಾಮಕೃಷ್ಣ ಭಟ್ಟ ೧೦೦ಮೀ ಓಟದಲ್ಲಿ ಹಾಗೂ ೨೦೦ಮೀ.ಓಟದಲ್ಲಿ ಪ್ರಥಮ ಸ್ಥಾನಗಳಿಸಿ ಎರಡೂ ಸ್ಪರ್ಧೆಯಲ್ಲಿಯೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲಾ ಮಟ್ಟಕ್ಕೆ ಇತಿಹಾಸ ನಿರ್ಮಿಸಿದ್ದಾಳೆ. ಅನನ್ಯಾ ಅರುಣ ಕಾಮತ ೪೦೦ಮೀ.ಓಟದಲ್ಲಿ ಪ್ರಥಮಸ್ಥಾನ ಪಡೆದು ಸಾಧನೆ ಮಾಡಿದರೆ ಗಗನ ಎನ್ ನಾಯ್ಕ ಬಾಲಕರ ೧೦೦ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ೪x೧೦೦ಮೀ ರೀಲೇಯಲ್ಲಿ ಸರಸ್ವತಿ ವಿದ್ಯಾಕೇಂದ್ರದಿಂದ ಕುಮಟಾ ತಾಲೂಕನ್ನು ಪ್ರತಿನಿಧಿಸಿದ್ದ ಅನನ್ಯಾ ಅರುಣ ಕಾಮತ,ನಯನಾ ಭಟ್ಟ,ಗಾಯತ್ರಿ ಗುನಗ,ಸೌಮ್ಯ ಪಟಗಾರ…
Read MoreDay: October 10, 2018
ತಾಲೂಕಾ ಮಟ್ಟದಲ್ಲಿ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಸಾಧನೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಸಂಘಟನೆಯಲ್ಲಿ ಕುಮಟಾದ ಮಹಾತ್ಮಾಗಾಂಧಿ ಮೈದಾನದಲ್ಲಿ ಇತ್ತೀಚಿಗೆ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಸಿ.ವಿ.ಎಸ್.ಕೆ ಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. 100 ಮೀ. ಓಟದಲ್ಲಿ ಸಾರ್ಥಕ ಪೈ ಪ್ರಥಮ, ಗುಂಡು ಎಸೆತದಲ್ಲಿ ತೃತೀಯ, ಆದರ್ಶ ನಾಯ್ಕ 100 ಮೀ. ಓಟದಲ್ಲಿ ದ್ವಿತೀಯ, ಉದ್ದಜಿಗಿತದಲ್ಲಿ ತೃತೀಯ, ತ್ರಿವಿಧ ಜಿಗಿತದಲ್ಲಿ ಪ್ರಥಮ, ಸಂಕಲ್ಪ ನಾಯ್ಕ 200 ಮೀ. ಹಾಗೂ 400 ಮೀ. ನಲ್ಲಿ ಪ್ರಥಮ, ಅನಿರುದ್ಧ ಭಟ್ಟಕೆರೆ 800 ಮೀ. ನಲ್ಲಿ ಪ್ರಥಮ, ಚರಣ ನಾಯ್ಕ 800 ಮೀ. ನಲ್ಲಿ ದ್ವಿತೀಯ ಹಾಗೂ ಭರ್ಚಿ ಎಸೆತದಲ್ಲಿ ದ್ವಿತೀಯ, ತಿಲಕ ನಾಯ್ಕ ಎತ್ತರ ಜಿಗಿತದಲ್ಲಿ ತೃತೀಯ, ಸುಹಾಗ ಭಂಡಾರಿ ಚಕ್ರ ಎಸೆತದಲ್ಲಿ ತೃತೀಯ, ನಿಸರ್ಗ ನಾಯ್ಕ 100 ಮೀ. ಓಟದಲ್ಲಿ ದ್ವಿತೀಯ, ಸಹನಾ ನಾಯ್ಕ 200 ಮೀ. ನಲ್ಲಿ ತೃತೀಯ, ಬಾಲಕಿಯರ 4×100…
Read Moreಕೊಂಕಣದಲ್ಲಿ ಜಲಜಾಗೃತಿ ಸಂಘದ ಉದ್ಘಾಟನೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಸೆಲ್ಕೊ ಫೌಂಡೇಶನ್ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಸಂಗಮ ಸೇವಾ ಸಂಸ್ಥೆ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ‘ಶರಧಿ ಜಲಜಾಗೃತಿ ಸಂಘ’ವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸೀತಾರಾಮ ಶೆಟ್ಟಿ, ಇಂದಿನ ದಿನಗಳಲ್ಲಿ ಮಾನವನ ಬಳಕೆಗೆ ದೊರೆಯುವ ಶುದ್ಧ ನೀರಿನ ಪ್ರಮಾಣ ಅತ್ಯಂತ ಕಡಿಮೆ ಇದ್ದು ನಾವೆಲ್ಲಾ ಅತ್ಯಂತ ಜಾಗರೂಕತೆಯಿಂದ ಬಳಸುವದು ಅತ್ಯಂತ ಅವಶ್ಯಕ ಹಾಗೂ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಇಂತಹ ಸಂಘಗಳ ಸ್ಥಾಪನೆ ಪೂರಕವಾಗುವದು ಎಂದು ನುಡಿದರು. ಶಿಕ್ಷಕ ಶಿವಾನಂದ ಭಟ್ಟ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಮುರಲೀಧರ ಪ್ರಭು ವಹಿಸಿದ್ದರು. ವೇದಿಕೆಯಲ್ಲಿ ಸಿ.ವಿ.ಎಸ್.ಕೆಯ ಮುಖ್ಯಾಧ್ಯಾಪಕಿ ಸುಮಾ ಪ್ರಭು, ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್.ದೇಶಭಂಡಾರಿ, ಶ್ರೀನಿವಾಸ ಭಟ್ಟ ಉಪಸ್ಥಿತರಿದ್ದರು. ರವೀಂದ್ರ ಶೆಟ್ಟಿ ಸ್ವಾಗತಿಸಿದರು, ಶಿವಾನಂದ ಭಟ್ಟ ವಂದಿಸಿದರು, ಶಿಕ್ಷಕ…
Read Moreಜಿಲ್ಲೆಯ ವೇಗದ ಓಟದಲ್ಲಿ ‘ಸಾರ್ಥಕ’ತೆಯನ್ನು ಮೆರೆದ ಕೊಂಕಣದ ಸಿ.ವಿ.ಎಸ್.ಕೆ ಪ್ರೌಢಶಾಲೆ
ಕುಮಟಾ: ಇತ್ತೀಚೆಗೆ ಕಾರವಾರದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೊಂಕಣದ ಸಿ.ವಿ.ಎಸ್.ಕೆ ಪ್ರಾಢಶಾಲೆಯ ಸಾರ್ಥಕ ಪೈ 100ಮೀ. ಹಾಗೂ ಅನಿರುದ್ಧ ಭಟ್ಟಕೆರೆ 800ಮೀ. ಓಟದ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲೆಯ ಅತೀ ವೇಗದ ಓಟಗಾರರೆಂಬ ಹೆಗ್ಗಳಿಕೆಗೆ ಪಾತ್ರರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದಕ್ಕೆ ಪೂರಕವೆಂಬಂತೆ, ಶಾಲೆಯ ಆದರ್ಶ ನಾಯ್ಕ ಹಾಗೂ ದೀಕ್ಷಾ ನಾಯ್ಕ ಇವರು ಕ್ರಮವಾಗಿ ತ್ರಿವಿಧ ಜಿಗಿತ ಮತ್ತು ಚದುರಂಗದಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ತಮ್ಮ ಹೆಸರನ್ನು ದಾಖಲಿಸಿದ್ದಾರೆ. 200ಮೀ. ಓಟದ ಸ್ಪರ್ಧೆಯಲ್ಲಿ ಸಂಕಲ್ಪ ನಾಯಕ ಈತನು ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಅರ್ಹನಾಗಿದ್ದಾನಲ್ಲದೆ, ಬಾಲಕಿಯರ 200ಮೀ. ರಿಲೇಯಲ್ಲಿ ಶಾಲೆಯು ದ್ವಿತೀಯ ಸ್ಥಾನಗೈದು ಕ್ರೀಡಾಕೂಟದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಶೈಕ್ಷಣಿಕ, ಸಾಂಸ್ಕೃತಿಕ…
Read More