ಕುಮಟಾ: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ದ್ವಿತೀಯ ಸ್ಥಾನದ ಜೊತೆಗೆ ಟಾಪ್ 10ರಲ್ಲಿ ಒಂಭತ್ತು ಸ್ಥಾನ ಪಡೆಯುವುದರೊಂದಿಗೆ ಅತ್ಯುತ್ತಮ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸತತವಾಗಿ ರಾಜ್ಯಮಟ್ಟದ ರ್ಯಾಂಕ್ಗಳನ್ನು ಗಳಿಸಿ ಎಲ್ಲರ ಗಮನವನ್ನು ತನ್ನೆಡೆಗೆ ಸೆಳೆಯುತ್ತ ಬಂದಿದ್ದ ಸಿವಿಎಸ್ಕೆ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಈ ಬಾರಿಯೂ ಶೇ.100 ರಷ್ಟಾಗಿದ್ದು, ರಾಜ್ಯ ಮಟ್ಟದ ಟಾಪ್ 10 ರ್ಯಾಂಕ್ಗಳಲ್ಲಿ ಒಟ್ಟಾರೆ 9 ರ್ಯಾಂಕ್ಗಳನ್ನು ತನ್ನದಾಗಿಸಿಕೊಂಡಿದ್ದಲ್ಲದೆ, ರಾಜ್ಯ ಮಟ್ಟದ ದ್ವಿತೀಯ ಸ್ಥಾನವನ್ನು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದಾರೆ. ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕುಮಾರ ಸಾಯಿಕಿರಣ ಶೇಟ್ ಹಾಗೂ ಕುಮಾರಿ ಪೂರ್ವಾ ನಾಯ್ಕ ತಲಾ 625…
Read MoreMonth: August 2021
ಕೊಂಕಣದಲ್ಲಿ ಸಂಭ್ರಮದ 75ರ ಸ್ವಾತಂತ್ರ್ಯೋತ್ಸವ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಂಗಸಂಸ್ಥೆಗಳಿಂದ 75ರ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಟ್ರಸ್ಟ್ನ ಅಧ್ಯಕ್ಷರಾದ ವಿಠ್ಠಲ ನಾಯಕ ನೆರವೇರಿಸಿದರು. ಸಂಸ್ಥೆಯ ಕಾರ್ಯದರ್ಶಿ ಮುರಲಿಧರ ಪ್ರಭು ಮಾತನಾಡಿ, ನನಗಿಂತ ದೇಶ ಮುಖ್ಯ ಅನ್ನುವುದು ಪ್ರತಿಯೊಬ್ಬರ ನಿಲುವಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು, ಹಾಕಿ ಮಾಂತ್ರಿಕ ಧ್ಯಾನಚಂದ ಅವರ ದೇಶಭಕ್ತಿಯ ಉಕ್ತಿಯನ್ನು ಮನೋಜ್ಞವಾಗಿ ಸ್ಪಷ್ಟಪಡಿಸಿದರು. 75ರ ಸಂಭ್ರಮದ ನೆನಪಿಗೆ 75 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅನಾವರಣಗೊಳಿಸಿ ಭಾರತಮಾತೆಯ ನಕಾಶೆಯ ಸುತ್ತ 75 ಹಣತೆಯನ್ನು ಬೆಳಗಿಸಿದ್ದು ಕಾರ್ಯಕ್ರಮಕ್ಕೆ ಮೆರಗನ್ನು ತಂದಿತ್ತು. ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ವೀಕ್ಷಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಸ್ಪರ್ಧೆಗಳನ್ನು ನಡೆಸಿ, ವಿಜೇತರಾದವರಿಗೆ ಬಹುಮಾನಗಳನ್ನು ಘೋಷಿಸಲಾಯಿತು. ಸಂಸ್ಥೆಯ ವಿಶ್ವಸ್ಥರಾದ ರಮೇಶ ಪ್ರಭು, ರಾಮನಾಥ ಕಿಣಿ, ನಿವೃತ್ತ ಪ್ರಾಚಾರ್ಯ ಎಂ.ಎಂ.ಹೆಗಡೆ, ಅಂಗ ಸಂಸ್ಥೆಗಳ ಮುಖ್ಯಸ್ಥರು, ಗುರುರಾಜ ಶೆಟ್ಟಿ, ಪ್ರಾಚಾರ್ಯ ಮಹೇಶ…
Read More