ಕುಮಟಾ 22-11-2021: ರಾಷ್ಟ್ರೀಯ ಶಿಕ್ಷಣ ನೀತಿ 2020 ರ ವಿಶ್ಲೇಷಣೆ ಮತ್ತು ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಏರ್ಪಡಿಸಲಾಗಿತ್ತು. ಶ್ರೀ ಎಸ್.ಆರ್.ಮನಹಳ್ಳಿ ವಿಶ್ರಾಂತ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬಾಗಲಕೋಟ ಅವರು ಕಾರ್ಯಗಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಷ್ಟೀಯ ಶಿಕ್ಷಣ ನೀತಿ ಇದರ ಅನುಷ್ಠಾನದ ಕುರಿತು ನಿಖರ ಮಾಹಿತಿಗಳನ್ನು ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ಭಾರತದಲ್ಲಿ ಮಕ್ಕಳೇ ದೇಶದ ಆಸ್ತಿ ಎಂದು ತಿಳಿದಿರುವಾಗ ಈ ಶಿಕ್ಷಣ ಭಾರತದಲ್ಲಿ ಮುಂದೊಂದು ದಿನ ಹೊಸ ಕ್ರಾಂತಿಯನ್ನುಂಟುಮಾಡಿ ಭಾರತ ವಿಶ್ವಗುರು ಆಗಲು ಸಾಧ್ಯ, ಸ್ವಾವಲಂಬಿತ ಭಾರತ ಆಗಲು ಸಾಧ್ಯ ಎಂದು ಹಲವು ಉದಾಹರಣೆಗಳ ಮೂಲಕ ವಿಶ್ಲೇಷಿದರು. ವಿದ್ಯಾರ್ಥಿಗಳು ಯಾವ ಒತ್ತಡಕ್ಕೆ ಒಳಗಾಗದೇ ನಲಿಕಲಿವ ಹಾಗೂ ಸೃಜನಶೀಲ ವ್ಯಕ್ತಿತ್ವ ನಿರ್ಮಾಣದ ಗುಣಮಟ್ಟದ ಶಿಕ್ಷಣ ಇದಾಗಿದೆ ಎಂದರು. ರಾಷ್ಟ್ರೀಯ ಶಿಕ್ಷಣದ ಎಂಟು ಹಂತಗಳನ್ನು ವಿವರಿಸಿದರು. ಟ್ರಸ್ಟಿನ…
Read More