ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಒಂಭತ್ತನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಭೂಮಿಕಾ ಸತೀಶ ಭಟ್ಟ ಇವಳು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಮ್ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಇವರು ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಉತ್ತಮ ಭಾಷಣಕಾರಳು, ಸಂಗೀತ ಕಲಾವಿದಳು, ಚಿತ್ರ ಕಲಾವಿದಳೂ ಆದ ಈಕೆಯ ಈ ಅಪರೂಪದ ಪ್ರತಿಭೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. ಸಂಸ್ಕøತ ಶಿಕ್ಷಕರಾದ ಗೀತಾ ಮೂಳೆ ಹಾಗೂ ಸುರೇಶ ಹೆಗಡೆ ಮಾರ್ಗದರ್ಶನ ಮಾಡಿದ್ದರು.
Read MoreMonth: December 2021
ಸಿವಿಎಸ್ಕೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿಯಲ್ಲಿ ಇತ್ತೀಚೆಗೆ ಜಿಲ್ಲಾಮಟ್ಟದ ಭಗವದ್ಗೀತಾ ಅಭಿಯಾನದ ಪ್ರಯುಕ್ತ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಕುಮಾರಿ ಭೂಮಿಕಾ ಎಸ್. ಭಟ್ಟ ಪ್ರಥಮ ಸ್ಥಾನ, ಕುಮಾರ ಚಂದನ ಹೆಗಡೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇ ರೀತಿ, ಭಗವದ್ಗೀತಾ ಕಂಠಪಾಠದಲ್ಲಿ ಕುಮಾರ ಶ್ರೀನಿವಾಸ ವಿ. ಶಾನಭಾಗ ತೃತೀಯ ಸ್ಥಾನ ಪಡೆದು ಸಾಧನೆಗೈದಿದ್ದಾರೆ. ಪ್ರಾಥಮಿಕ ವಿಭಾಗದಿಂದ ಕುಮಾರಿ ಸ್ನೇಹಾ ಉದಯ ನಾಯಕ ಭಾಷಣದಲ್ಲಿ ತೃತೀಯ ಸ್ಥಾನ ಪಡೆದರೆ, ಕುಮಾರಿ ಅನನ್ಯ ಎಸ್. ಭಟ್ಟ ಕಂಠಪಾಠದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಅಭಿನಂದಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
Read More