ಕುಮಟಾ: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್(ಎಟಿಎಲ್)ನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ(ಎಕ್ಸ್ಪೋ 2022)ವನ್ನು ಏರ್ಪಡಿಸಲಾಗಿತ್ತು. ಜೆ.ಸಿ.ಕಾಲೇಜ್ ಅಂಕೋಲಾದ ವಿಶ್ರಾಂತ ಪ್ರಾಂಶುಪಾಲರಾದ ಶ್ರೀ ವಿ.ಆರ್.ವೆರ್ಣೇಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳ ಒತ್ತಡದ ಬದುಕು ಹಾಗೂ ಸ್ಮರಣಶಕ್ತಿಯ ಕುರಿತಾಗಿ ಮನೋಜ್ಞವಾಗಿ ವಿವರಿಸಿದರು. ಸ್ಮರಣಶಕ್ತಿ ವಂಶಪಾರಂಪರ್ಯವಲ್ಲ, ಅದು ನಮ್ಮ ಸ್ವಂತ ಶಕ್ತಿ. ಪಂಚೇಂದ್ರಿಯಗಳಿಗೆ ಸಂಸ್ಕಾರ ನೀಡಿ ಅದನ್ನು ವರ್ಧಿಸಿಕೊಳ್ಳುವುದು ಹೇಗೆ ಎಂಬುದನ್ನು ಹತ್ತು-ಹಲವು ಉದಾಹರಣೆಗಳೊಂದಿಗೆ ವಿವರಿಸಿ, ಕಲಿಕೆಯಲ್ಲಿ ಕಠಿಣ ಪರಿಶ್ರಮ ಅಗತ್ಯ ಹಾಗೂ ಅನಿವಾರ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಂತರ ಮಾತನಾಡಿದ ಇನ್ನೋರ್ವ ಅತಿಥಿಗಳಾದ ಮಂಗಳೂರು ಇನಸ್ಟಿಟ್ಯೂಟ್ ಆಫ್ ಟೆಕ್ನೋಲೊಜಿ ಆಂಡ್ ಎಂಜಿನಿಯರಿಂಗ್ ರಸಾಯನಶಾಸ್ತೃ ವಿಭಾಗದ ನಿಕಟಪೂರ್ವ ಹಿರಿಯ ಸಹಾಯಕ ಉಪನ್ಯಾಸಕರಾದ ಡಾ. ಅಪರ್ಣಾ ಪಿ.ಐ.ಭಟ್ಟ, ಪ್ರಶ್ನೆಗಳನ್ನು ಮಾಡುವುದರ ಮೂಲಕ…
Read More