ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಶಿಕ್ಷಣ ಸಂಸ್ಥೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ವಿಶ್ವ ಸಾರಸ್ವತ ಫೆಡರೇಶನ್ ಅಧ್ಯಕ್ಷ ಹಾಗೂ ಹಾಂಗ್ಯೊ ಐಸ್ಕ್ರೀಂ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ ಪೈ ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿಗಳಾದ ಮುರಳೀಧರ ಪ್ರಭು, 97 ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಇಂದು ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕಲಿಯುವ ಆಸಕ್ತಿ ಇರುವ ಸರಿ ಸುಮಾರು 50 ಬಡ ಪ್ರತಿಭಾವಂತ ಮಕ್ಕಳಿಗೆ ಬಹುತೇಕ ಎಲ್ಲವೂ ಉಚಿತ ಮಾಡಿದ್ದೇವೆ. ದಿನಕರ ದೇಸಾಯಿಯವರ ಆದರ್ಶವನ್ನು ಮುಂದಿಟ್ಟು ಶಿಕ್ಷಣ ದಾನಿಗಳಿಂದಲೇ ನಡೆಸಿಕೊಂಡು ಹೋಗುತ್ತಿರುವ ಸಂಸ್ಥೆ ಇದಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಟಾಪ್ 10 ರ್ಯಾಂಕ್ನಲ್ಲಿ ಪ್ರತಿ ವರ್ಷ ನಮ್ಮ ಶಾಲೆಯ ಐದರಿಂದ ಆರು ವಿದ್ಯಾರ್ಥಿಗಳಾದರೂ ಇದ್ದೇ ಇರುತ್ತಾರೆ ಎಂಬುದು ನಮಗೆ ಹೆಮ್ಮೆ. ಈ ಸಂಸ್ಥೆ ಗೆ ಪ್ರದೀಪ…
Read More